SHIVAMOGGA LIVE NEWS | 7 FEBRUARY 2024
SHIMOGA : ವಿದ್ಯಾನಗರದ ರೈಲ್ವೆ ಮೇಲ್ಸೇತುವೆ ನಿರ್ಮಾಣದ ಬೆನ್ನಿಗೆ ಎನ್ಸಿಸಿ ಕಚೇರಿ ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ಡಿವೈಡರ್ ವಿಸ್ತರಿಸಲಾಗಿದೆ. ಇದರಿಂದ ರೋಟರಿ ಚಿತಾಗಾರ ಮತ್ತು ಪಕ್ಕದ ಬಡಾವಣೆಗಳಿಗೆ ತೆರಳುವವರಿಗೆ ಸಮಸ್ಯೆ ಉಂಟಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಮಾಜಿ ಸದಸ್ಯರ ನಿಯೋಗ ಇವತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.
ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ ಪಾಲಿಕೆ ಮಾಜಿ ಸದಸ್ಯರು ಹೆಚ್ಚುವರಿಯಾಗಿ ನಿರ್ಮಿಸಿರುವ ಡಿವೈಡರ್ ತೆರವು ಮಾಡಬೇಕು. ಚಿತಾಗಾರಕ್ಕೆ ಮತ್ತು ಪಕ್ಕದ ಬಡಾವಣೆಗೆ ತೆರಳಲು ಅನುಕೂಲವಾಗುಂತೆ ಮಾಡಬೇಕು ಎಂದು ಆಗ್ರಹಿಸಿದರು.
ಪಾಲಿಕೆ ಮಾಜಿ ಸದಸ್ಯರಾದ ರಮೇಶ್ ಹೆಗ್ಡೆ, ಹೆಚ್.ಸಿ.ಯೋಗೇಶ್, ಶಿವಕುಮಾರ್, ವಿಶ್ವನಾಥ ಕಾಶಿ, ನಾಗರಾಜ ಕಂಕಾರಿ, ಯಮುನಾ ರಂಗೇಗೌಡ, ಅಫ್ತಾಬ್ ಪರ್ವೀಜ್, ರಂಗೇಗೌಡ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಪೊಲೀಸ್ ಠಾಣೆ ಮುಂಭಾಗ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200