ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 7 AUGUST 2024 : ಕಾಂಗ್ರೆಸ್ ಪಕ್ಷದಲ್ಲಿ ಮೂರು ಬಗೆಯ ಮುಖಂಡರು, ಕಾರ್ಯಕರ್ತರಿದ್ದಾರೆ (Workers). ಅದರೆ ಪಕ್ಷಕ್ಕೆ ಅಗತ್ಯವಿರುವುದು ಒಂದೇ ಬಗೆಯ ಕಾರ್ಯಕರ್ತ ಎಂದು ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ವಿಶ್ಲೇಷಿಸಿದರು.
ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಸೋಲಿಗೆ ಕಾರಣ ತಿಳಿಯುವ ಸತ್ಯಶೋಧನಾ ಸಭೆಯಲ್ಲಿ ವಿ.ಎಸ್.ಉಗ್ರಪ್ಪ ಮಾತನಾಡಿದರು.
ಮೂರು ಬಗೆಯ ಮುಖಂಡರು, ಕಾರ್ಯಕರ್ತರು
ಪಕ್ಷಗಳಲ್ಲಿ ಪ್ರದಕ್ಷಿಣೆ ಮಾಡುವ ಒಂದು ವರ್ಗ ಇರುತ್ತದೆ. ಮುಖ್ಯಮಂತ್ರಿ, ಸಚಿವರು, ಪ್ರಮುಖರು ಬಂದಾಗಷ್ಟೆ ಪಕ್ಷದ ಕಚೇರಿಗೆ ಭೇಟಿ ಕೊಡುತ್ತಾರೆ. ಎರಡನೇ ವರ್ಗದ ಕಾರ್ಯಕರ್ತರು ಜನರ ಜೊತೆಗೆ ಇರುತ್ತದೆ. ಜನರಿಗೆ ಕೆಲಸಗಳನ್ನು ಮಾಡಿಕೊಡುತ್ತಲೆ ಇರುತ್ತಾರೆ. ಇಂತಹ ಕಾರ್ಯಕರ್ತರು ಯಾರಿಗೂ ಗೊತ್ತಾಗುವುದಿಲ್ಲ. ಮೂರನೆ ವರ್ಗದ ಕಾರ್ಯಕರ್ತರು ಮಾಧ್ಯಮಗಳ ಕ್ಯಾಮರಾಗಳಿಗೆ ಪೋಸ್ ಕೊಡುತ್ತಾರೆ ಎಂದು ವಿ.ಎಸ್.ಉಗ್ರಪ್ಪ ವಿಶ್ಲೇಷಿಸಿದರು.

ಕಾಂಗ್ರೆಸ್ಗೆ ಎಂತಹ ಕಾರ್ಯಕರ್ತರು ಬೇಕು?
ಕಾರ್ಯಕರ್ತರು ವೈಚಾರಿಕತೆ ಬೆಳೆಸಿಕೊಳ್ಳಬೇಕು. ನಾಯಕರ ಜೊತೆಗು ಇರಬೇಕು. ಜನರ ಜೊತೆಗೂ ಇರಬೇಕು. ಕೇವಲ ನಾಯಕರ ಬ್ಯಾಗ್ ಹಿಡಿದು ಓಡಾಡುವುದು, ಸಲ್ಯೂಟ್ ಹೊಡೆಯುವುದಲ್ಲ. ತಪ್ಪು ಮಾಡಿದರೆ ನಾಯಕನಿಗು ಮುಲಾಜಿಲ್ಲದೆ ಪ್ರಶ್ನೆ ಮಾಡುವ ದಮ್ಮು, ತಾಕತ್ತು ಬೆಳೆಸುಕೊಳ್ಳಬೇಕು. ಆಗ ಪಕ್ಷ ಬಲವಾಗಿ ಬೇರೂರುತ್ತದೆ ಎಂದು ಉಗ್ರಪ್ಪ ತಿಳಿಸಿದರು.
ಇದನ್ನೂ ಓದಿ ⇓
ಆಗಸ್ಟ್ 10ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ 600ಕ್ಕೂ ಹೆಚ್ಚು ಮಹಿಳಾ ನ್ಯಾಯವಾದಿಗಳು
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





