ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ನೇಣು ಬಿಗಿದು ಆತ್ಮಹತ್ಯೆಯ ಸವಾಲೊಡ್ಡಿದ ಮುಖಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 19 AUGUST 2024 : ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ (Governor) ನಡೆ ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಅಲ್ಲದೆ ರಾಜ್ಯಪಾಲರ ನಡೆ ಖಂಡಿಸಿ ಮನವಿ ಸಲ್ಲಿಸಲಾಯಿತು.

ಮೆರವಣಿಗೆ, ಟೈರ್‌ಗೆ ಬೆಂಕಿ

ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಅಮೀರ್‌ ಅಹಮದ್‌ ವೃತ್ತ, ನೆಹರು ರೋಡ್‌, ಗೋಪಿ ಸರ್ಕಲ್‌, ಬಾಲರಾಜ ಅರಸ್‌ ರಸ್ತೆ, ಮಹಾವೀರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮತ್ತು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು.

Congress-Protest-in-Shimoga-against-Governor

ಪ್ರತಿಭಟನಾ ಸಭೆ, ಯಾರೆಲ್ಲ ಏನೇನು ಹೇಳಿದರು?

R.M.Manjunatha Gowda

ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ಮಾತನಾಡಿ, ಹಿಂದುಳಿದ ವರ್ಗದ ಪ್ರಮುಖ ನಾಯಕ ಸಿದ್ದರಾಮಯ್ಯ. ಜನತಂತ್ರ ಅವರ ಪರವಾಗಿದೆ. ಐದು ವರ್ಷ ಸರ್ಕಾರ ನಡೆಯಲಿದೆ. ಇದನ್ನು ಅಸ್ಥಿರಗೊಳಿಸಲು ಬಿಜೆಪಿ, ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದೆ. ಪ್ರಜಾತಂತ್ರ ವಿರೋಧಿ ನಡೆ ಹಿನ್ನೆಲೆ ರಾಷ್ಟ್ರಪತಿಯವರು ರಾಜ್ಯಪಾಲರನ್ನು ಹಿಂದಕ್ಕೆ ಕರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

Ayanuru Manjunatha

ಮಾಜಿ ಸಂಸದ ಆಯನೂರು ಮಂಜುನಾಥ್‌ ಮಾತನಾಡಿ, ಹಾಸನದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ರಕ್ಷಣೆ ಬೇಕಿದೆ. ಇತ್ತ ಶಿವಮೊಗ್ಗದಲ್ಲಿ ಹಗರಣಗಳು ನಡೆದಿವೆ. ಚೋಟಾ ಸಹಿ ಹಾಕಿ ತಂದೆಯನ್ನೇ ಜೈಲಿಗೆ ಕಳುಹಿಸಿದವರ ವಿರುದ್ಧ ತನಿಖೆಯಾಗಬೇಕಿದೆ. ಹಾಗಾಗಿ ಬಿಜೆಪಿ ಮತ್ತು ಜೆಡಿಎಸ್‌ನವರು ಮೊದಲು ಹಾಸನ ಮತ್ತು ಶಿವಮೊಗ್ಗ ಪಾದಯಾತ್ರೆ ನಡೆಸಲಿ ಎಂದರು.  

congress protest in Shimoga

c3

ಶಿವಮೊಗ್ಗ, ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ 56 ಸಾವಿರ ಕೋಟಿ ರೂ. ಮೊತ್ತದ ಗ್ಯಾರಂಟಿ ಯೋಜನೆಯನ್ನು ರೂಪಿಸಿದೆ. ಬಿಜೆಪಿಯವರು ಇದ್ದಿದ್ದರೆ ಇದರಲ್ಲೂ 40 ಪರ್ಸೆಂಟ್‌ ಪಡೆದಿರುತ್ತಿದ್ದರು. ಮೈತುಂಬ ಭ್ರಷ್ಟಾಚಾರದ ಅರೋಪ ಹೊತ್ತವರು ನಮ್ಮ ಮುಖಂಡರ ವಿರುದ್ದ ಆರೋಪ ಮಾಡುತ್ತಿದ್ದಾರೆ‌. ಆದರೆ ಸಿದ್ದರಾಮಯ್ಯ ಆರೋಪ ಮುಕ್ತವಾಗಲಿದ್ದಾರೆ. ಬಿಜೆಪಿ ಮತ್ತಷ್ಟು ಆಧೋಗತಿಗೆ ಹೋಗಲಿದೆ ಎಂದರು.

congress protest in Shimoga

B K Mohan

ಭದ್ರಾವತಿ ನಗರಸಭೆ ಸದಸ್ಯ ಬಿ.ಕೆ.ಮೋಹನ್‌ ಮಾತನಾಡಿ, ಅಶೋಕ್, ಯಡಿಯೂರಪ್ಪ, ವಿಜಯೇಂದ್ರ ಪ್ರಾಮಾಣಿಕರೆ ಎಂದು ತಿಳಿಸಬೇಕು. ಆದರೆ ಸಿದ್ದರಾಮಯ್ಯ ಕಪ್ಪು ಚುಕ್ಕಿ ರಹಿತ ರಾಜಕಾರಣಿ. ಸಿದ್ದರಾಮಯ್ಯ ವಿರುದ್ಧ ಆರೋಪ ಸಾಬೀತಾದರೆ ನೇಣು ಬಿಗಿದುಕೊಳ್ಳುತ್ತೇನೆ. ಈ ಧೈರ್ಯ ಬಿಜೆಪಿಯವರಿಗೆ ಇದೆಯಾ ಎಂದು ಪ್ರಶ್ನಿಸಿದರು.

congress protest in Shimoga

Kimmane Rathnakar

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಮಾತನಾಡಿ, ಭಾರತ ಮಾತ್ರವಲ್ಲ ಜಗತ್ತಿನ ಯಾವುದೇ ನ್ಯಾಯಾಲಯದಲ್ಲಿಯು ಸಿದ್ದರಾಮಯ್ಯ ವಿರುದ್ಧ ಕ್ರಮ ಆಗುವುದಿಲ್ಲ. ಶಾಸಕರು ದೂರು ನೀಡಲು ಮುಂದಾದರೆ ರಾಜ್ಯಪಾಲರು ಎಂಟತ್ತು ದಿನದ ಬಳಿಕ ಸಮಯ ಕೊಡುತ್ತಾರೆ. ಆದರೆ ಖಾಸಗಿ ವ್ಯಕ್ತಿಗೆ ಕೂಡಲೆ ಸಮಯ ನೀಡಿದ್ದಾರೆ. ಈ ಹಿಂದೆಯೇ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅರ್ಜಿ ಸಲ್ಲಿಕೆಯಾಗಿದ್ದರು ಅನುಮತಿ ನೀಡಿಲ್ಲ. ಬಿಜೆಪಿಯವರೇನು ಧರ್ಮರಾಯನ ಮಕ್ಕಳ, ಸತ್ಯ ಹರಿಶ್ಚಂದ್ರರಾ. ರಾಜ್ಯಪಾಲರ ನಡೆ ಖಂಡಿಸಿ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಾಯಾತ್ರೆ ಕೈಗೊಳ್ಳುತ್ತೇನೆ ಎಂದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌.ಪ್ರಸನ್ನ ಕುಮಾರ್‌ ನೇತೃತ್ವದಲ್ಲಿ ಹೋರಾಟ ನಡೆಯಿತು. ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್‌ ಬಾನು, ಪ್ರಮುಖರಾದ ಎಂ.ಶ್ರೀಕಾಂತ್‌, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಎಸ್‌.ಕೆ.ಮರಿಯಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ ⇒ ಶಿಕಾರಿಪುರದಲ್ಲಿ ಯಡಿಯೂರಪ್ಪ ಮನೆ ಮುತ್ತಿಗೆ ಯತ್ನ, ಬಂಧನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 19, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment