SHIMOGA NEWS, 26 SEPTEMBER 2024 : ಬಿಜೆಪಿ – ಜೆಡಿಎಸ್ ಪಕ್ಷಗಳ ಷಡ್ಯಂತ್ರ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಿದರು. ಗಾಂಧಿ ಪಾರ್ಕ್ನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ – ಜೆಡಿಎಸ್ ಷಡ್ಯಂತ್ರದ ವಿರುದ್ಧ ಘೋಷಣೆ (Protest) ಕೂಗಿದರು.
ಯಾರೆಲ್ಲ ಏನೆಲ್ಲ ಹೇಳಿದರು?
» ಆಯನೂರು ಮಂಜುನಾಥ್, ಮಾಜಿ ಸಂಸದ
ಬಿಜೆಪಿಯ ನಾಲ್ವರು ಮುಖ್ಯಮಂತ್ರಿಗಳ ಪೈಕಿ ಮೂವರ ಮೇಲೆ ಆರೋಪ ಇದೆ. ಕೆಲವರು ಬೇಲ್ ಮೇಲೆ ಹೊರಗಿದ್ದಾರೆ. ಎಫ್ಐಅರ್ ಕೂಡ ಹಾಕಲಾಗಿದೆ. ಏಡ್ಸ್ ಹರಡುವ ಶಾಸಕ, ಹೆಂಗಸರಷ್ಟೆ ಅಲ್ಲ ಗಂಡಸರ ಮೇಲೂ ಅತ್ಯಾಚಾರ ಮಾಡುವವರು ಬಿಜೆಪಿಯಲ್ಲಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬೇಲ್ ಮೇಲೆ ಹೊರಗಿದ್ದಾರೆ. ಇವರಿಗೆಲ್ಲ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ.
» ಬಲ್ಕಿಷ್ ಬಾನು, ವಿಧಾನ ಪರಿಷತ್ ಸದಸ್ಯೆ
ರಾಜ್ಯಪಾಲರು ಬಿಜೆಪಿಯ ಪ್ರತಿರೂಪವಾಗಿದ್ದಾರೆ. ಸಂಘ ಪರಿವಾರದ ಸದಸ್ಯರಂತೆ ವರ್ತಿಸುತ್ತಿದ್ದಾರೆ. ಇದಕ್ಕೆಲ್ಲ ಕಾಂಗ್ರೆಸ್ ಹೆದರುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಕುಂದಿಸಲು ಸಾಧ್ಯವಿಲ್ಲ. ಅವರು ರಾಜೀನಾಮೆ ಕೊಡುವುದಿಲ್ಲ. ಅವರೇ ಇಂದಿಗೂ ನಮ್ಮ ಮುಖ್ಯಮಂತ್ರಿ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಮುಖರಾದ ರಮೇಶ್ ಹೆಗ್ಡೆ, ಎಸ್.ಕೆ.ಮರಿಯಪ್ಪ, ಚಂದ್ರಭೂಪಾಲ್, ಜಿ.ಡಿ.ಮಂಜುನಾಥ್, ಮಧುಸೂದನ್, ಚೇತನ್ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್, ಯಾಕೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200