ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 16 ಡಿಸೆಂಬರ್ 2019
ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ನೇತೃತ್ವದಲ್ಲಿ ಇವತ್ತು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪೊಲೀಸರು ಉಪವಾಸ ಕುಳಿತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಗಾಂಧಿ ಪಾರ್ಕ್ ಮುಂಭಾಗ ಉಪವಾಸ ಸತ್ಯಾಗ್ರಹ ಆಯೋಜಿಸಲಾಗಿತ್ತು. ಮಾಜಿ ಶಾಸಕ ಪ್ರಸನ್ನಕುಮಾರ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ರಮೇಶ್ ಹೆಗ್ಡೆ ಸೇರಿದಂತೆ ಹಲವರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.
ದೇಶಕ್ಕೆ ಆತಂಕ ತಂದಿದೆ
ಪೌರತ್ವ ಕಾಯ್ದೆಗೆ ತಿದ್ದುಪಡಿ ತಂದು ಕೇಂದ್ರ ಸರ್ಕಾರ, ದೇಶದಲ್ಲಿ ಆತಂಕದ ಪರಿಸ್ಥಿತಿ ನಿರ್ಮಿಸಿದೆ. ಮೂರ್ನಾಲ್ಕು ತಲೆಮಾರಿನ ದಾಖಲೆಗಳನ್ನು ಒದಗಿಸಬೇಕು ಎಂದು ಹೇಳಲಾಗುತ್ತಿದೆ. ಈ ಮೂಲಕ ದೊಡ್ಡ ಮಟ್ಟದಲ್ಲಿ ಸಮಸ್ಯೆ ಸೃಷ್ಟಿಸಲಾಗುತ್ತಿದೆ ಎಂದು ಮಾಜಿ ಶಾಸಕ ಪ್ರಸನ್ನಕುಮಾರ್ ಆರೋಪಿಸಿದರು.

ಸತ್ಯಾಗ್ರಹಿಗಳು ಅರೆಸ್ಟ್
ಗಾಂಧಿ ಪಾರ್ಕ್ ಮುಂದೆ ಸತ್ಯಾಗ್ರಹ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಉಪವಾಸ ಸತ್ಯಾಗ್ರಹ ನಡೆಸದಂತೆ ಪೊಲೀಸರು ಮನವಿ ಸೂಚಿಸಿದ್ದರು. ಆದರೆ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಕುಳಿತಿದ್ದರಿಂದ ಎಲ್ಲರನ್ನು ಬಂಧಿಸಲಾಯಿತು. ಈ ವೇಳೆ ಗಾಂಧಿ ಪಾರ್ಕ್ ಮುಂಭಾಗ ಕೆಲಕಾಲ ಹೈಡ್ರಾಮಾ ನಡೆಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Former MLA Prasanna Kumar and Congress Party Workers led a fasting protest in Shimoga Gandhi Park. Police Arrest the protesters.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





