ಕೂಡಲೆ ಪಂಚಾಯಿತಿ ಚುನಾವಣೆ ನಡಸಿ, ಕಾರ್ಮಿಕ ವಿರೋಧಿ ಯೋಚನೆ ಕೈಬಿಡಿ, ಸರ್ಕಾರದ ವಿರುದ್ಧ ಶಿವಮೊಗ್ಗ ಕಾಂಗ್ರೆಸ್ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕು, ಎಪಿಎಂದಿ ಕಾಯ್ದೆಗೆ ತಿದ್ದುಪಡಿಗೆ ವಿರೋಧ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸಿಗರು, ಕೋವಿಡ್ ನೆಪದಲ್ಲಿ ಬಿಜೆಪಿಯವರು ತಮ್ಮ ಪಕ್ಷದ ಕಾರ್ಯಕರ್ತರನ್ನು ಗ್ರಾಮ ಪಂಚಾಯಿತಿಗೆ ನಾಮನಿರ್ದೇಶನ ಮಾಡಲು ಹೊರಟಿದ್ದಾರೆ. ಪಂಚಾಯತ್ ರಾಜ್ ಅಧಿನಿಯಮದಲ್ಲಿ ಇದಕ್ಕೆ ಅವಕಾವಿಲ್ಲ. ಹಾಗಾಗಿ ಕೂಡಲೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.

https://www.facebook.com/liveshivamogga/videos/2299124960381441/?t=4

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಸಮಸ್ಯೆ ಉಂಟು ಮಾಡಿದ್ದಾರೆ. ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದು ಸಣ್ಣ ಉದ್ಯಮ, ರೈತರಿಗೆ ನಷ್ಟ ಮಾಡುತ್ತಿದ್ದಾರೆ. ಇದರಿಂದ ಖಾಸಗಿ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ.

ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸಿದೆ. ಕಾರ್ಮಿಕರನ್ನು ನಿರ್ಲಕ್ಷಿಸುತ್ತರುವ ಸರ್ಕಾರದ ನಡೆ ವಿರುದ್ಧ ಹೋರಾಟ ರೂಪಿಸಲಾಗುತ್ತದೆ ಎಂದು ಕಾಂಗ್ರೆಸಿಗರು ಎಚ್ಚರಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಮಾಜಿ ಶಾಸಕ ಆರ್.ಪ್ರಸನ್ನಕುಮಾರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

https://www.facebook.com/liveshivamogga/videos/749247015882154/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment