ಭದ್ರಾವತಿ ಗಲಾಟೆ ಕೇಸ್, ಹಸಿ ಸುಳ್ಳು ಹೇಳ್ತಿದೆ ಕಾಂಗ್ರೆಸ್, ಜೈ ಶ್ರೀರಾಮ್ ಅಂದರೆ ಶಾಸಕರಿಗೆ ಸಿಟ್ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಮಾರ್ಚ್‌ 2021

ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಸಂಬಂಧ ಕಾಂಗ್ರೆಸ್ ಪಕ್ಷ ಹಸಿ ಸುಳ್ಳನ್ನು ಪ್ರಚಾರ ಮಾಡುತ್ತಿದೆ. ಸದನದಲ್ಲೂ ಇದೆ ಸುಳ್ಳುಗಳನ್ನು ಹೇಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮಪ್ರಸಾದ್, ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ನಮ್ಮ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಿಂದೆ ಸುರಗಿತೋಪು ಚೌಡೇಶ್ವರಿ ದೇವಸ್ಥಾನದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದಾಗಲೂ ಸಂಗಮೇಶ್ವರ್ ಅವರು ಸಿಟ್ಟಾಗಿದ್ದರು ಎಂದು ಆರೋಪಿಸಿದರು.

ಹಸಿ ಹಸಿ ಸುಳ್ಳುಗಳು

ಜೈ ಶ್ರೀರಾಮ್, ವಂದೇ ಮಾತರಂ, ಭಾರತ್ ಮಾತಾ ಕೀ ಜೈ ಅನ್ನುವ ಘೋಷಣೆಗಳು ನಮ್ಮಲ್ಲಿ ಉತ್ಸಾಹ ಮೂಡಿಸುತ್ತದೆ. ಅವತ್ತು ಕೂಡ ಜೈ ಶ್ರೀರಾಮ್ ಘೋಷಣೆ ಕೂಗಿದ್ದೆವು. ಆ ಬಳಿಕ ಹಲ್ಲೆ ನಡೆಸಲಾಗಿದೆ ಎಂದು ಧರ್ಮಪ್ರಸಾದ್ ತಿಳಿಸಿದರು.

ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಲಾಯಿತು. ಆಮೇಲೆ ಮ್ಯಾಟ್ ಸುಡಲು ಮುಂದಾಗಿದ್ದರು ಎಂದು ಹೇಳಿಕೆ ತಿರುಚಿದರು‌. ಒಂದು ವೇಳೆ ಆ ಮ್ಯಾಟ್‌ಗೆ ಬೆಂಕಿ ತಗುಲಿದ್ದರೆ ಕ್ಷಣಮಾತ್ರದಲ್ಲಿ ಬೆಂಕಿ ಹೊತ್ತಿಕೊಂಡಿರುತ್ತಿತ್ತು ಎಂದರು.

ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಬಿಜೆಪಿಯವರು ಭಾಗವಹಿಸಿದ್ದೇಕೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಪ್ರಶ್ನಿಸಿದ್ದಾರೆ. ಆದರೆ ಕ್ರೀಡಕೂಟ ಆಯೋಜಿಸಿದ್ದು ಭದ್ರಾವತಿಯ ಬಿವೈಕೆ ಸ್ಪೋರ್ಟ್ಸ್ ಕ್ಲಬ್. ಇದು ಪ್ರತಿ ವರ್ಷ ನಡೆಯುವ ಸ್ಪರ್ಧೆ. ಇದಕ್ಕೂ ಕಾಂಗ್ರೆಸ್‌ಗು ಸಂಬಂಧ ಇಲ್ಲ ಎಂದು ತಿಳಿಸಿದರು.

ಕಬಡ್ಡಿ ಪಂದ್ಯಾವಳಿ ನಡೆದ ಸ್ಥಳದಲ್ಲಿ ಮೊದಲು ಗಲಾಟೆ ಮಾಡಿದರು. ಬಳಿಕ ಆಸ್ಪತ್ರೆಗೆ ಬಂದು ನಮ್ಮವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಧರ್ಮಪ್ರಸಾದ್ ಆರೋಪಿಸಿದರು. ಈ ಸಂಬಂಧ ರೆಕಾರ್ಡ್ ಆಗಿರುವ ವಿಡಿಯೋಗಳನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದರು.

ಪ್ರಮುಖರಾದ ಮಂಗೋಟೆ ರುದ್ರೇಶ್, ಬಿ.ಕೆ.ಶ್ರೀನಾಥ್, ಶಿವರಾಜ್, ಆನಂದ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment