Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಕೃಷ್ಣ ಕೆಫೆ ಬಳಿ ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿ ಹೌಹಾರಿದ ಕಾಂಗ್ರೆಸ್‌ ನಿಯೋಗ

ಶಿವಮೊಗ್ಗ ಕೃಷ್ಣ ಕೆಫೆ ಬಳಿ ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿ ಹೌಹಾರಿದ ಕಾಂಗ್ರೆಸ್‌ ನಿಯೋಗ

15/07/2023 9:08 AM
ನಿತಿನ್‌ ಕೈದೊಟ್ಲು

SHIVAMOGGA LIVE | 15 JULY 2023

SHIMOGA : ನಗರದ ಇಂದಿರಾ ಕ್ಯಾಂಟೀನ್‌ಗೆ (Indira Canteen) ಕಾಂಗ್ರೆಸ್‌ ಪಕ್ಷದ ನಿಯೋಗ ಭೇಟಿ ಪರಿಶೀಲನೆ ನಡೆಸಿತು. ಈ ವೇಳೆ ಇಂದಿರಾ ಕ್ಯಾಂಟೀನ್‌ನ ಅವಸ್ಥೆ ಕಂಡು ನಿಯೋಗದಲ್ಲಿದ್ದವರು ಹೌಹಾರಿದರು. ಮಹಾನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಕ್ಯಾಂಟೀನ್‌ಗೆ ಸೂಕ್ತ ಸೌಲಭ್ಯ ಒದಗಿಸುವಂತೆ ತಾಕೀತು ಮಾಡಿದರು.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ನಗರದ ಕೃಷ್ಣ ಕೆಫೆ ಎದುರು ಡಿಡಿಪಿಐ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ (Indira Canteen)  ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರ ನೇತೃತ್ವದ ನಿಯೋಗ ಭೇಟಿ ನೀಡಿ ಪರಿಶೀಲಿಸಿತು.

ಏನೇನೆಲ್ಲ ಪರಿಶೀಲನೆ ನಡೆಸಿದರು?

ಇಂದಿರಾ ಕ್ಯಾಂಟೀನ್‌ ಆವರಣದಲ್ಲಿರುವ ಸ್ವಚ್ಛತೆ, ಉಪಕರಣಗಳು, ಪಾತ್ರೆಗಳು, ಬಾಗಿಲು, ಆಹಾರದ ಗುಣಮಟ್ಟವನ್ನು ಪರಿಶೀಲಿಸಲಾಯಿತು. ಈ ಸಂದರ್ಭ ಹಲವು ನ್ಯೂನತೆ ಕಂಡು ಬಂದಿದ್ದು, ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಗರಂ ಆದರು. ಗುತ್ತಿಗೆದಾರರು, ಹಿಂದಿನ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟೀನ್‌ನ ಬೋರ್ಡ್‌, ಬಾಗಿಲುಗಳು ಮುರಿದು ಹೋಗಿವೆ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲದಿರುವುದು ಗಮನಕ್ಕೆ ಬಂತು.

ಆಹಾರದ ಗುಣಮಟ್ಟ ಪರಿಶೀಲನೆ

ಗುಣಮಟ್ಟ ಪರೀಕ್ಷೆಗಾಗಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸುಂದರೇಶ್‌ ಮತ್ತು ಕೆಲವು ಕಾರ್ಯಕರ್ತರು ಕ್ಯಾಂಟೀನ್‌ನಲ್ಲಿ ಊಟ ಮಾಡಿದರು. ಮೊಸರನ್ನದಲ್ಲಿ ಮೊಸರಿನ ಬದಲು ನೀರು ಹಾಕಲಾಗಿದೆ ಎಂದು ಆರೋಪಿಸಿದರು.

ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌.ಎಸ್‌.ಸುಂದರೇಶ್‌ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು.

ಎಲ್ಲರಿಗು ಹೊಟ್ಟೆ ತುಂಬ ಊಟ ಸಿಗಬೇಕು. ಕಡಿಮೆ ದರದಲ್ಲಿ ಊಟ, ತಿಂಡಿ ದೊರೆಯುವಂತೆ ಮಾಡಲು ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ನಂತರ ಬಂದ ಸರ್ಕಾರ ನಿರ್ವಹಣೆ ಮಾಡದೆ ತಿರಸ್ಕರಿಸಿತು. ಈಗ ಇಂದಿರಾ ಕ್ಯಾಂಟೀನ್‌ ಪುನಶ್ಚೇತನಕ್ಕೆ ಸರ್ಕಾರ 100 ಕೋಟಿ ರೂ. ಮೀಸಲಿಟ್ಟಿದೆ.

Congress-President-HS-Sundaresh-Visit-indira-Canteen

ಇಲ್ಲಿ ಗುಣಮಟ್ಟ ಮತ್ತು ಸರಿಯಾದ ಪ್ರಮಾಣದಲ್ಲಿ ಆಹಾರ ಸಿಗುತ್ತಿಲ್ಲ. ಸರಿಯಾಗಿ ನಿರ್ವಹಣೆ ಮಾಡದೆ ಕಟ್ಟಡಕ್ಕೆ ಹಾನಿಯಾಗಿದೆ. ಈ ಕುರಿತು ಪಾಲಿಕೆ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ನಿರ್ವಹಣೆಗಾಗಿ 12 ಲಕ್ಷ ರೂ. ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ನೊಂದು ವಾರದಲ್ಲಿ ರಿಪೇರಿಯಾಗಲಿದೆ ಎಂದು ಭರವಸೆ ನೀಡಿದ್ದಾರೆ.

150723%20Indira%20Canteen%20at%20DDPI%20Office%20compund%20in%20Shimoga

ಇದನ್ನೂ ಓದಿ – ಶಿವಮೊಗ್ಗದ ಮೊದಲ ಇಂದಿರಾ ಕ್ಯಾಂಟೀನ್‌ ಈಗ ಹೇಗಿದೆ? ಊಟ, ತಿಂಡಿ ಸಿಕ್ತಿದ್ಯ? ಪ್ರತಿದಿನ ಎಷ್ಟು ಜನ ಬರ್ತಾರೆ?

ಗುಣಮಟ್ಟದ ಆಹಾರ ಸಿಗಬೇಕು ಎನ್ನುವುದು ನಮ್ಮ ಆಗ್ರಹ. ಸರ್ಕಾರದ ಯೋಜನೆ ಫಲಾನುಭವಿಗಳಿಗೆ ಸರಿಯಾಗಿ ತಲುಪಬೇಕು. ಈ ಕುರಿತು ಪ್ರತಿ ವಾರ ಪರಿಶೀಲನೆ ನಡೆಸುತ್ತೇವೆ. ಇಲ್ಲಿ ಕೆಲಸ ಮಾಡುವ ನೌಕರರಿಗೆ ಸರಿಯಾಗಿ ವೇತನ ಸಿಗುತ್ತಿಲ್ಲ ಸೇರಿದಂತೆ ಹಲವು ಸಮಸ್ಯೆಗಳು ಗಮನಕ್ಕೆ ಬಂದಿದೆ. ಈ ಕುರಿತು ಜಿಲ್ಲಾಧಿಕಾರಿ ಅವರು ಪರಿಶೀಲಿಸಬೇಕು ಎಂದು ಒತ್ತಾಯಿಸುತ್ತೇನೆ.

ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಈ ವೇಳೆ ಇದ್ದರು.‌

Modern Concretes

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Chain-Theft-at-Shimoga-City-CCTV-footage ಶಿವಮೊಗ್ಗದಲ್ಲಿ ಮಾಂಗಲ್ಯ ಸರ ಅಪಹರಣ | ಸಚಿವ ಮಧು ಬಂಗಾರಪ್ಪ ಪ್ರವಾಸ – ಫಟಾಫಟ್‌ ನ್ಯೂಸ್‌
Next Article Whatsapp-Helpline-by-Shimoga-MLA-SN-Channabasappa ಶಿವಮೊಗ್ಗ MLA ಕಚೇರಿಯಲ್ಲಿ ವಾಟ್ಸಪ್‌ ಹೆಲ್ಪ್‌ಲೈನ್‌ ಶುರು, ಏನಿದು? ಹೇಗಿರುತ್ತೆ? ಜನಕ್ಕೇನು ಉಪಯೋಗ?

ಇದನ್ನೂ ಓದಿ

Bommanakatte-incident-police-investigation-on
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ವ್ಯಕ್ತಿಯ ಹತ್ಯೆ, ಕೆರೆ ಏರಿ ಬಳಿ ಮೃತದೇಹ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
Nanjappa-Hospital-Doctors-Cancer-operation
SHIVAMOGGA CITY

ಸೂಜಿ ಗಾತ್ರದ ರಂಧ್ರದಲ್ಲಿ ಆಪರೇಷನ್‌ ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಏನಿದು ಶಸ್ತ್ರಚಿಕಿತ್ಸೆ? ಹೇಗಿತ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2025
Shimoga-News-update
SHIVAMOGGA CITY

ಇಂದು, ನಾಳೆ ಶಿವಮೊಗ್ಗದಲ್ಲಿ ಎನ್‌ಇಎಸ್‌ ಹವ್ಯಾಸಿ ರಂಗತಂಡದಿಂದ ನಾಟಕ, ಎಲ್ಲೆಲ್ಲಿ ಪ್ರದರ್ಶನ ಇರಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
tunga-dam-water-release-and-mantapa-in-shimoga
SHIVAMOGGASHIVAMOGGA CITY

ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ವಿವಿಧೆಡೆ ಜೂನ್‌ 17, 18ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
021023 Gandhi Bazaar during 144 section in Shimoga
CRIME DIARYSHIVAMOGGA CITY

ಗಾಂಧಿ ಬಜಾರ್‌ ಬಟ್ಟೆ ಮಾರುಕಟೆಯಿಂದ ಹೊರ ಬಂದ ಕೆಲಸಗಾರನಿಗೆ ಕಾದಿತ್ತು ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?