ಶಿವಮೊಗ್ಗ ಸಿಟಿ ಸೆಂಟರ್ ಮಾಲ್ ತನಿಖಾ ವರದಿ ಬಹಿರಂಗ, ಬಿಜೆಪಿ ನಾಯಕನ ರಾಜೀನಾಮೆಗೆ ಆಗ್ರಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 22 DECEMBER 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

 ಸುದ್ದಿಯ ಹಿನ್ನೆಲೆ 
ಬ್ಯಾರೀಸ್ ಸಂಸ್ಥೆಯು ಶಿವಮೊಗ್ಗದ ಸಿಟಿ ಸೆಂಟರ್ ಮಾಲ್  (city centre mall) ನಿರ್ವಹಣೆ ಮಾಡುತ್ತಿದೆ. ಗುತ್ತಿಗೆ ಅವಧಿಯನ್ನು 99 ವರ್ಷಕ್ಕೆ ವಿಸ್ತರಿಸುವಂತೆ ಸಂಸ್ಥೆಯು ಮನವಿ ಮಾಡಿತ್ತು. ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಮನವಿಯನ್ನು ತಿರಸ್ಕರಿಸಲಾಗಿತ್ತು. ಹಾಗಿದ್ದು ಮೇಯರ್ ಸೇರಿದಂತೆ ಯಾರ ಒಪ್ಪಿಗೆಯು ಇಲ್ಲಿದೆ ಪಾಲಿಕೆ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ವಿಷಯ ಸೇರ್ಪಡೆಯಾಗಿತ್ತು. ಈ ಕುರಿತು ಪರಿಶೀಲಿಸಲು ಸಮಿತಿ ರಚಿಸಲಾಗಿತ್ತು. ಸಮಿತಿಯ ವರದಿಯ ಈಚೆಗೆ ಸಮಾನ್ಯ ಸಭೆಯಲ್ಲಿ ಮಂಡಿಸಲಾಗಿದೆ.

ಶಿವಮೊಗ್ಗ : ಸಿಟಿ ಸೆಂಟರ್ ಮಾಲ್ ಗುತ್ತಿಗೆ ಅವಧಿ ವಿಸ್ತರಣೆ ವಿಷಯ ಪಾಲಿಕೆ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಸೇರ್ಪಡೆಯಾಗಲು ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಅವರು ಕಾರಣ ಎಂಬುದು ತನಿಖಾ ವರದಿಯಲ್ಲಿದೆ. ಅದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಆಗ್ರಹಿಸಿದ್ದಾರೆ.

Shimoga Nanjappa hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಜೆಂಡಾದಲ್ಲಿ ವಿಷಯ ಸೇರ್ಪಡೆಯಾಗಿದ್ದು ಹೇಗೆ ಎಂಬುದನ್ನು ತನಿಖೆ ಮಾಡಲು ಸಮಿತಿ ರಚಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ಪ್ರತಿಭಟನೆಯ ಬಳಿಕ ಸಮಿತಿಯ ವರದಿಯನ್ನು ಸಭೆಯಲ್ಲಿ ಮಂಡಿಸಲಾಗಿದೆ. ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಅವರು ಫೋನ್ ಮೂಲಕ ಅಧಿಕಾರಿಗೆ ವಿಷಯ ಸೇರಿಸಬೇಕು ಎಂದು ಸೂಚಿಸಿರುವುದು ವರದಿಯಿಂದ ಬಹಿರಂಗಗೊಂಡಿದೆ ಎಂದು ತಿಳಿಸಿದರು.

ಕೆಲವು ದಿನದ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಚನ್ನಬಸಪ್ಪ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತಪ್ಪು ಹೊರೆಸುವ ಪ್ರಯತ್ನ ಮಾಡಿದ್ದಾರೆ. 2015ರಲ್ಲೇ ಮಾಲ್ (city centre mall) ಲೀಸ್ ಅವಧಿಯನ್ನು 60 ವರ್ಷಕ್ಕೆ ವಿಸ್ತರಿಸಲು ಯತ್ನಿಸಲಾಗಿತ್ತು ಎಂದು ಹೇಳಿಕೆ ನೀಡಿದ್ದಾರೆ. ತಮ್ಮ ತಪ್ಪು ಮರೆಮಾಚಲು ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ರೇಖಾ ರಂಗನಾಥ್ ಆಪಾದಿಸಿದರು.

SMG-LIVE-WHATSAPP

ಸ್ಥಾಯಿ ಸಮಿತಿ ಸಭೆಯಲ್ಲಿ ತಿರಸ್ಕರಿಸಲ್ಪಟ್ಟ ವಿಷಯ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಸೇರ್ಪಡೆಯಾಗಲು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಇದು ಕೋಟ್ಯಂತರ ರುಪಾಯಿಯ ಹಗರಣವಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ – ಶಿವಮೊಗ್ಗ ರಿಂಗ್ ರೋಡ್, ಜಿಲ್ಲೆಯ ಹಲವು ಹೆದ್ದಾರಿ ಅಭಿವೃದ್ಧಿಗೆ ಒಪ್ಪಿಗೆ, ಯಾವೆಲ್ಲ ರಸ್ತೆ ಅಭಿವೃದ್ಧಿಯಾಗುತ್ತೆ?

ಪಾಲಿಕೆಯ ಕಾಂಗ್ರೆಸ್ ಸದಸ್ಯರಾದ ರಮೇಶ್ ಹೆಗ್ಡೆ, ಹೆಚ್.ಸಿ.ಯೋಗೇಶ್, ಆರ್.ಸಿ.ನಾಯ್ಕ್, ಯಮುನಾ ರಂಗೇಗೌಡ ಸುದ್ದಿಗೋಷ್ಠಿಯಲ್ಲಿದ್ದರು.

Shimoga nanjappa hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment