SHIVAMOGGA LIVE | 3 JUNE 2023
SHIMOGA : ಸಚಿವರಾದ (Minister) ಮೇಲೆ ಇದೆ ಮೊದಲ ಬಾರಿ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಮಧು ಬಂಗಾರಪ್ಪ ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ಬೃಹತ್ ಹಾರಗಳನ್ನು ಹಾಕಿ, ಬೈಕ್ ಜಾಥಾ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಎಲ್ಲೆಲ್ಲಿ ಹೇಗಿತ್ತು ಸ್ವಾಗತ?
ಮಲವಗೊಪ್ಪದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಶಿಕ್ಷಣ ಸಚಿವ (Minister) ಮಧು ಬಂಗಾರಪ್ಪ ಅವರನ್ನು ಸ್ವಾಗತಿಸಿದರು. ಇಲ್ಲಿನ ಬಸವೇಶ್ವರ ದೇವಸ್ಥಾನಕ್ಕೆ ತೆರಳಿದ ಮಧು ಬಂಗಾರಪ್ಪ ಪ್ರಾರ್ಥನೆ ಸಲ್ಲಿಸಿದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ನಗರದ ಎಂ.ಆರ್.ಎಸ್ ವೃತ್ತದಲ್ಲಿ ಕಾಂಗೆಸ್ ಪಕ್ಷದ ವತಿಯಿಂದ ಸಚಿವ ಮಧು ಬಂಗಾರಪ್ಪ ಅವರನ್ನು ಸ್ವಾಗತಿಸಲಾಯಿತು. ಮಧು ಬಂಗಾರಪ್ಪ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಘೋಷಣೆ ಕೂಗಿದರು. ಅನಾನಸ್ ಹಣ್ಣಿನ ಹಾರ ಹಾಕಿ, ಹರ್ಷ ವ್ಯಕ್ತಪಡಿಸಿದರು. ಇನ್ನು, ಎಂಆರ್ಎಸ್ ವೃತ್ತದಿಂದ ಲಗಾನ್ ಕಲ್ಯಾಣ ಮಂಟಪದವರೆಗೆ ಕಾರ್ಯಕರ್ತರು ಬೈಕ್ ಜಾಥಾ ನಡೆಸಿದರು.
ಅಲ್ಲಲ್ಲಿ ಬೃಹತ್ ಹಾರ, ದೇವರ ಪೂಜೆ
ಲಗಾನ್ ಕಲ್ಯಾಣ ಮಂದಿರದವರೆಗೆ ಹಾದಿ ಉದ್ದಕ್ಕು ಸಚಿವ ಮಧು ಬಂಗಾರಪ್ಪ ಅವರಿಗೆ ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ಅಲ್ಲಲ್ಲಿ ಬೃಹತ್ ಹಾರಗಳನ್ನು ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವಿದ್ಯಾನಗರ, ಹೊಳೆ ಬಸ್ ನಿಲ್ದಾಣ, ಸೈನ್ಸ್ ಮೈದಾನದಲ್ಲಿ ಬೃಹತ್ ಹಾರ ಹಾಕಲಾಯಿತು. ವಿದ್ಯಾನಗರದ ದೊಡ್ಡಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಇದನ್ನೂ ಓದಿ – 40 ಪರ್ಸೆಂಟ್ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯರ ಹೋರಾಟ, ಡಿಸಿ ಕಚೇರಿ ಗೇಟ್ಗೆ ಅಡ್ಡಲಾಗಿ ಕುಳಿತು ಆಕ್ರೋಶ
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಮುಖರಾದ ವಿಜಯ ಕುಮಾರ್, ರಂಗನಾಥ್, ದೇವೇಂದ್ರಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್ ಸೇರಿದಂತೆ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಇದ್ದರು.