ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2021
ಕಳೆದ ಎರಡು ದಿನದಿಂದ ಕಡಿಮೆಯಾಗಿದ್ದ ವರುಣ ಪುನಃ ಪ್ರತ್ಯಕ್ಷವಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯದ್ಯಂತ ರಾತ್ರಿಯಿಂದ ಮಳೆ ಪುನಾರಂಭವಾಗಿದೆ. ಜೋರು ಮಳೆಯಿಂದಾಗಿ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುವಂತಾಗಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ನಿರಂತರ ಮಳೆಯಾಗುತ್ತಿದೆ. ಕೆಲ ಹೊತ್ತು ಜೋರಾಗಿ ಸುರಿಯುವ ಮಳೆ, ಬಳಿಕ ಜಿಟಿಜಿಟಿಯಾಗಿ ಬೀಳುತಿತ್ತು. ಬಳಿಕ ಜೋರು ಮಳೆ ಆರಂಭವಾಗಿದೆ.
ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಆತಂಕ ಉಂಟಾಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಚರಂಡಿಗಳನ್ನು ಬಂದ್ ಮಾಡಲಾಗಿದೆ. ಹಾಗಾಗಿ ನಗರದ ಕೆಲವು ಕಡೆ ರಸ್ತೆಯಲ್ಲಿ ನೀರು ನಿಂತಿದೆ.
ಇನ್ನು, ನಿರಂತರ ಮಳೆಯಿಂದಾಗಿ ಕೆಲವು ಕಡೆ ತೋಟ, ಗದ್ದೆಗಳಲ್ಲಿ ನೀರು ನಿಂತಿದೆ. ಇತ್ತೀಚೆಗೆ ಭತ್ತ, ಶುಂಠಿ, ಜೋಳದ ಬಿತ್ತನೆ ಮಾಡಲಾಗಿತ್ತು. ಈಗ ಗದ್ದೆಯಲ್ಲಿ ನೀರು ನಿಂತಿದ್ದು, ಬೆಳಹಾನಿಯಾಗುವ ಆತಂಕವಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200