ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ಸೋಂಕಿತ ವ್ಯಕ್ತಿಯ ಅಂತ್ಯ ಸಂಸ್ಕಾರದ ವೇಳೆ ನಿರ್ಲಕ್ಷ್ಯ ತೊರಿಸಲಾಗಿದೆ ಎಂದು ಆರೋಪಿಸಿ, ಕಾರ್ಪೊರೇಟರ್ ನೇತೃತ್ವದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು. ಬಿ.ಹೆಚ್.ರಸ್ತೆಯನ್ನು ಬಂದ್ ಮಾಡಿ, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳೀಯರ ಆಕ್ರೋಶಕ್ಕೆ ಕಾರಣವೇನು?
ಕರೋನ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಅಂತ್ಯ ಸಂಸ್ಕಾರವನ್ನು ಶಿವಮೊಗ್ಗದ ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ನೆರವೇರಿಸಲಾಗಿತ್ತು. ಶುಕ್ರವಾರ ರಾತ್ರಿ ಎಂಟು ಗಂಟೆ ಹೊತ್ತಿಗೆ ಶವವನ್ನು ತಂದ ಮಹಾನಗರ ಪಾಲಿಕೆ ಅಧಿಕಾರಿಗಳು ಸಂಸ್ಕಾರ ನೆರವೇರಿಸಿದ್ದರು. ಆದರೆ ಮೃತದೇಹ ಸಂಪೂರ್ಣ ಸುಡದೆ ಅರೆಬರೆಯಾಗಿತ್ತು. ಸೋಂಕಿತ ವ್ಯಕ್ತಿಯ ಶವ ಸಂಸ್ಕಾರದ ವೇಳೆ ಈ ಪರಿ ನಿರ್ಲಕ್ಷ್ಯ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಯಿತು.
ನಿರ್ಲಕ್ಷ್ಯದ ಸಾಕ್ಷಿ ಹೇಳಿದ ಪಿಪಿಇ ಕಿಟ್
ಸಂಸ್ಕಾರ ನಡೆಸಲು ಚಿತಾಗಾರಕ್ಕೆ ಮೃತದೇಹ ತರುವಾಗ ಪಾಲಿಕೆ ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸಿದ್ದರು. ಸಂಸ್ಕಾರದ ಬಳಿಕ ಆ ಪಿಪಿಇ ಕಿಟ್ಗಳನ್ನು ಅಲಿಯೇ ಬಿಸಾಡಿ ಹೋಗಿದ್ದರು. ಇದು ಅಧಿಕಾರಿಗಳು, ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿ ಒದಗಿಸಿದವು.
ನಡು ರಾತ್ರಿಯೇ ನಡೆಯಿತು ಪ್ರತಿಭಟನೆ
ರೋಟರಿ ಚಿತಾಗಾರದಲ್ಲಿ ಕರೋನ ಸೋಂಕಿತರ ಸಂಸ್ಕಾರ ನಡೆಸಬೇಡಿ ಎಂದು ಸ್ಥಳೀಯ ಸ್ಲಂ ನಿವಾಸಿಗಳು ಒತ್ತಾಯಿಸಿದ್ದರು. ಹೀಗಿದ್ದೂ ಶವ ತಂದು ಅರೆಬರೆ ಸುಟ್ಟಿದ್ದರಿಂದ ರೊಚ್ಚಿಗೆದ್ದ ಸ್ಥಳೀಯರು, ಶುಕ್ರವಾರ ಮಧ್ಯರಾತ್ರಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಇವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ದಿಢೀರ್ ರಸ್ತೆ ತಡೆದು ಆಕ್ರೋಶ
ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ, ಪೊಲೀಸರು ಲಾಠಿ ಬೀಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಇವತ್ತು ಸ್ಥಳೀಯರು ದಿಢೀರ್ ರಸ್ತೆ ತಡೆ ನಡೆಸಿದರು. ಮಹಾದೇವಿ ಟಾಕೀಸ್ ಬಳಿ ಬಿ.ಹೆಚ್.ರಸ್ತೆಯ ಒಂದು ಬದಿಯನ್ನು ಬಂದ್ ಮಾಡಿ, ಪಾಲಿಕೆ ವಿರುದ್ಧ ಪ್ರತಿಭಟನೆ ನಡೆಸಿದರು. ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಕಾರ್ಪೊರೇಟರ್ ಯಮುನಾ ರಂಗೇಗೌಡ ಅವರು ಜನರೊಂದಿಗೆ ಪ್ರತಿಭಟನೆ ನಡೆಸಿದರು.
ನಿರ್ಲಕ್ಷಕ್ಕೆ ಕಾರ್ಪೊರೇಟರ್ಗಳು ಆಕ್ರೋಶ
ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಪಾಲಿಕೆ ಅಧಿಕಾರಿಗಳು ಶವ ಸಂಸ್ಕಾರದ ವೇಳೆ ನಿರ್ಲಕ್ಷ್ಯ ತೋರಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದಾರೆ. ಮೃತ ವ್ಯಕ್ತಿಯ ಕುಟುಂಬಕ್ಕೂ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿದರು.
ಸ್ಥಳಕ್ಕೆ ದೌಡಾಯಿಸಿದ ಪಾಲಿಕೆ ಕಮಿಷನರ್
ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದ ಪಾಲಿಕೆ ಕಮಿಷನರ್ ಚಿದಾನಂದ ವಠಾರೆ, ಜನರ ಮನವೊಲಿಸಲು ಯತ್ನಿಸಿದರು. ಇನ್ಮುಂದ ಹೀಗೆ ಆಗೋದಿಲ್ಲ ಎಂದು ಭರವಸೆ ನೀಡಿದರು. ಕಮಿಷನರ್ ಭರವಸೆ ಮೇರೆಗೆ ಜನರು ಪ್ರತಿಭಟನೆಯನ್ನು ಕೈಬಿಟ್ಟರು.
ಡಿವೈಎಸ್ಪಿ ಉಮೇಶ್ ನಾಯಕ್, ಇನ್ಸ್ಪೆಕ್ಟರ್ ವಸಂತ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






