ಶಿವಮೊಗ್ಗದ ಫುಡ್ ಕೋರ್ಟ್’ಗಳು ಬಂದ್, ಸಭೆ, ಸಮಾರಂಭ ನಿಷೇಧ, ಕರೋನ ಹರಡದಂತೆ ಪಾಲಿಕೆ ಕೈಗೊಂಡ ಕ್ರಮಗಳೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 20 ಮಾರ್ಚ್ 2020

ಜಗತ್ತನ್ನು ತಲ್ಲಣಗೊಳಿಸಿರುವ ಕರೋನ ಸೋಂಕು ಹರಡದಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಶಾಪಿಂಗ್ ಕಾಂಪ್ಲೆಕ್ಸ್, ಬೀದಿ ಬದಿ ವ್ಯಾಪಾರ, ಫುಡ್ ಕೋರ್ಟ್’ಗಳನ್ನು ಬಂದ್ ಮಾಡಲಾಗುತ್ತಿದೆ ಎಂದರು ತಿಳಿಸಿದರು.

ಪ್ರಧಾನಿ ಸೂಚಿಸಿದಂತೆ ನಡೆಯೋಣ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜನತಾ ಕರ್ಫ್ಯೂ ಎಂದು ಸೂಚಿಸಿದ್ದಾರೆ. ಅದರಂತೆ ಆ ದಿನ ಜನರು ಮನೆಯೊಳಗೆ ಇದ್ದು, ಕರೋನ ಸೋಂಕು ಹರಡದಂತೆ ತಡೆಯಬೇಕಿದೆ ಎಂದು ಮೇಯರ್ ಸುವರ್ಣ ಶಂಕರ್ ಮನವಿ ಮಾಡಿದರು.

ಪಾಲಿಕೆ ಏನೆಲ್ಲ ಕ್ರಮ ಕೈಗೊಂಡಿದೆ?

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ಕಮಿಷನರ್ ಚಿದಾನಂದ ವಠಾರೆ ಅವರು, ಕರೋನ ಹಿನ್ನೆಲೆ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಹಲವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಶಾಪಿಂಗ್ ಮಾಲ್, ಕ್ಲಬ್, ಜಿಮ್, ಸ್ವಿಮ್ಮಿಂಗ್ ಪೂಲ್, ರಂಗಮಂದಿರಗಳು, ಚಿಕನ್, ಮಟನ್ ಶಾಪ್’ಗಳು ಮುಚ್ಚಲು ಕ್ರಮ

Mahanagara Palike Shivamogga 1 1

ಮದುವೆ, ಜಾತ್ರೆ, ಸಂತೆ, ವಸ್ತು ಪ್ರದರ್ಶನ, ಸಂಗೀತ ಹಬ್ಬ, ಕ್ರೀಡಾಕೂಟ, ಸಾರ್ವಜನಿಕರು ಹೆಚ್ಚು ಸೇರುವ ಸಭೆ, ಸಮಾರಂಭಗಳು ತಾತ್ಕಾಲಿಕ ನಿಷೇಧ

ಬೀದಿ ಬದಿ ವ್ಯಾಪಾರ ಮಾಡುವ ತಿಂಡಿ, ತಿನಿಸು, ಸಸ್ಯಾಹಾರ ಮತ್ತು ಮಾಂಸಾಹಾರ ಫುಡ್ ಕೋರ್ಟ್’ಗಳು ಬಂದ್.

ವಾರ್ಡ್’ವಾರು ಔಷಧಿ ಸಿಂಪಡಣೆ, ಫಾಗಿಂಗ್ ಮಾಡಲಾಗುತ್ತಿದೆ. ಈಗಾಗಲೇ ವಿನೋಬನಗರ, ಹೊಸಮನೆ ಬಡಾವಣೆಯಲ್ಲಿ ಫಾಗಿಂಗ್ ಮಾಡಲಾಗಿದೆ.

90352956 1078396939188392 2509682900111196160 o.jpg? nc cat=100& nc sid=8024bb& nc eui2=AeELGHJ9geDdVVk9RA8QL9 3H8ZYE cRu5dh8EHIU4M5pqxLLPHeupR YLczkcu52I qrLqvvMbE JB0WXKHVRZxH6AYRdsWOuJ0 B5Xr9PqCQ& nc ohc=A5aXcjgneZ8AX8srOQQ& nc ht=scontent.fblr11 1

ಹೊಟೇಲ್’ಗಳಲ್ಲಿ ಶುಚಿತ್ವ ಕಾಪಾಡಬೇಕು. ಗ್ರಾಹಕರಿಗೆ ಬಿಸಿ ನೀರು ಪೂರೈಸಬೇಕು. ಕೆಲಸಗಾರರ ವೈಯಕ್ತಿಕ ಶುಚಿತ್ವಕ್ಕೆ ನಿಗಾ ವಹಿಸಬೇಕು ಎಂದು ಸೂಚಿಸಲಾಗಿದೆ.

ಕರೋನ ಕುರಿತು ಜಾಗೃತಿ ಮೂಡಿಸಲು ಸಾರ್ವಜನಿಕ ಪ್ರದೇಶದಲ್ಲಿ ಫ್ಲೆಕ್ಸ್ ಅಳವಡಿಸಲಾಗಿದೆ. ಕಸ ಸಂಗ್ರಹಣೆ ವಾಹನಗಳಲ್ಲಿ ಈಗಾಗಲೇ ಮೈಕ್ ಮೂಲಕ ಜಾಗೃತಿ ಸಂದೇಶ ಪ್ರಸಾರ ಮಾಡಲಾಗುತ್ತಿದೆ.

ವಿದೇಶ ಮತ್ತು ಅನ್ಯ ರಾಜ್ಯಗಳಿಂದ ಬಂದಿರುವವರು ಮತ್ತು ಬರುತ್ತಿರುವವರ ಕುರಿತು ಮಾಹಿತಿ ಪಡೆದು, ಅರೋಗ್ಯ ಇಲಾಖೆಗೆ ರವಾನಿಸಲಾಗುತ್ತಿದೆ.

90241822 1078395615855191 5104584750308261888 n.jpg? nc cat=102& nc sid=110474& nc eui2=AeGzlBKizc2MzByl0ELnlzn2ZXe1c8m yEuXMYGYjPh whgu96phBfZ9570qyOcrp5GGprdgRiCv4nzWfSiLLorREikxHO7j9FXn37bqjTAx5A& nc ohc=E3Wp2b46T5YAX8tayG3& nc ht=scontent.fblr11 1

ಪ್ರವಾಹ ಸಂದರ್ಭದಲ್ಲಿ ತಂಡಗಳನ್ನು ರಚಿಸಿದ ಮಾದರಿಯಲ್ಲೇ ಕರೋನ ಹಿನ್ನೆಲೆಯಲ್ಲೂ ತಂಡ ರಚಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಕಮಿಷನರ್ ಚಿದಾನಂದ ವಠಾರೆ ಅವರು ತಿಳಿಸಿದರು. ಸಹಾಯವಾಣಿ ಸಂಖ್ಯೆ 104, 08066692000, 08046848600

ಉಪಮೇಯರ್ ಸುರೇಖಾ ಮುರಳೀಧರ್, ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವು ಕಾರ್ಪೊರೇಟರ್’ಗಳು ಸುದ್ದಿಗೋಷ್ಠಿಯಲ್ಲಿದ್ದರು.

90202662 826131727866739 997276755997753344 o.jpg? nc cat=104& nc sid=8024bb& nc eui2=AeERntxgeh4h8AATxu YbIIALYq8DrUqLCKeIDYLl61PQT3km7PcpJ7ek9OMFm6WiB0Z1XOXrW4WChLYprl6prMTfFq9C0pS2st EgUgzhBhog& nc ohc=qCoNQBhYpLoAX9QbopD& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2020

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

Leave a Comment