ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 30 ಮಾರ್ಚ್ 2020
ಕರೋನ ಕುರಿತು ಜಾಗೃತಿ ಮೂಡಿಸಲು ಶಿವಮೊಗ್ಗದ ಕಲಾವಿದರು ವಿಭಿನ್ನ ಪ್ರಯತ್ನ ಮಾಡಿದ್ದಾರೆ. ತಮ್ಮ ಕುಂಚದ ಮೂಲಕ ರಸ್ತೆ ಮೇಲೆಯೆ ಜಾಗೃತಿ ಪೇಂಟಿಂಗ್ ಅರಳಿಸಿದ್ದಾರೆ.

ರಾಜ್ಯ ನಾಮಫಲಕ ಕಲಾವಿದರ ಸಂಘದ ವತಿಯಿಂದ ಗೋಪಿ ಸರ್ಕಲ್’ನಲ್ಲಿ ಕರೋನ ಜಾಗೃತಿ ಪೇಟಿಂಗ್ ಮಾಡಲಾಗಿದೆ. ಕರೋನ ಮಹಾಮಾರಿ ಜಗತ್ತನ್ನು ಆವರಿಸುತ್ತಿರುವ ದೃಶ್ಯವನ್ನು ಚಿತ್ರೀಕರಿಸಿದ್ದಾರೆ.
ಕಾರಣವಿಲ್ಲದೆ ಮನೆಯಿಂದ ಹೊರಗೆ ಸುತ್ತಾಡುವವರಿಗೆ ಎಚ್ಚರಿಕೆ ಸಂದೇಶವನ್ನು ಬರೆಯಲಾಗಿದೆ. ಕಾರಣವಿಲ್ಲದೆ ಹೊರಗೆ ಬಂದರೆ ನೀವು, ನಿನ್ನ ಮನೆಗೆ ಬರುವೆ ನಾನು ಎಂದು ವಾರ್ನಿಂಗ್ ನೀಡಲಾಗಿದೆ. ವಿಭಿನ್ನವಾಗಿರುವ ಈ ಜಾಗೃತಿ ಸಂದೇಶ ಗಮನ ಸೆಳೆಯುತ್ತಿದೆ.
ನಾಮಫಲಕ ಕಲಾವಿದರ ಸಂಘದ ಹಲವರು ಈ ಸಂದೇಶ ಚಿತ್ರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





