ಶಿವಮೊಗ್ಗ ಲೈವ್.ಕಾಂ | SHIMOGA | 30 ಮಾರ್ಚ್ 2020
ಕರೋನ ಕುರಿತು ಜಾಗೃತಿ ಮೂಡಿಸಲು ಶಿವಮೊಗ್ಗದ ಕಲಾವಿದರು ವಿಭಿನ್ನ ಪ್ರಯತ್ನ ಮಾಡಿದ್ದಾರೆ. ತಮ್ಮ ಕುಂಚದ ಮೂಲಕ ರಸ್ತೆ ಮೇಲೆಯೆ ಜಾಗೃತಿ ಪೇಂಟಿಂಗ್ ಅರಳಿಸಿದ್ದಾರೆ.

ರಾಜ್ಯ ನಾಮಫಲಕ ಕಲಾವಿದರ ಸಂಘದ ವತಿಯಿಂದ ಗೋಪಿ ಸರ್ಕಲ್’ನಲ್ಲಿ ಕರೋನ ಜಾಗೃತಿ ಪೇಟಿಂಗ್ ಮಾಡಲಾಗಿದೆ. ಕರೋನ ಮಹಾಮಾರಿ ಜಗತ್ತನ್ನು ಆವರಿಸುತ್ತಿರುವ ದೃಶ್ಯವನ್ನು ಚಿತ್ರೀಕರಿಸಿದ್ದಾರೆ.
ಕಾರಣವಿಲ್ಲದೆ ಮನೆಯಿಂದ ಹೊರಗೆ ಸುತ್ತಾಡುವವರಿಗೆ ಎಚ್ಚರಿಕೆ ಸಂದೇಶವನ್ನು ಬರೆಯಲಾಗಿದೆ. ಕಾರಣವಿಲ್ಲದೆ ಹೊರಗೆ ಬಂದರೆ ನೀವು, ನಿನ್ನ ಮನೆಗೆ ಬರುವೆ ನಾನು ಎಂದು ವಾರ್ನಿಂಗ್ ನೀಡಲಾಗಿದೆ. ವಿಭಿನ್ನವಾಗಿರುವ ಈ ಜಾಗೃತಿ ಸಂದೇಶ ಗಮನ ಸೆಳೆಯುತ್ತಿದೆ.
ನಾಮಫಲಕ ಕಲಾವಿದರ ಸಂಘದ ಹಲವರು ಈ ಸಂದೇಶ ಚಿತ್ರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200