ಮಾಸ್ಕ್ ಇಲ್ಲ ಅಂತಾ ದಂಡ ಹಾಕುತ್ತಿದ್ದವರು ಇಲ್ಲಿ ಗಪ್‌ಚುಪ್, ಸರ್ಕಾರಿ ಕಾರ್ಯಕ್ರಮದಲ್ಲಿ ಮಾರ್ಗಸೂಚಿಗೆ ಕ್ಯಾರೆ ಅನ್ನೋರಿಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021

ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರ ಕಾಪಾಡುತ್ತಿಲ್ಲ ಎಂದು ಜನರು, ವ್ಯಾಪಾರಿಗಳ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು, ಪೊಲೀಸರು ದಂಡ ಹಾಕುತ್ತಿದ್ದಾರೆ. ಆದರೆ ಸರ್ಕಾರದ ಕಾರ್ಯಕ್ರಮವೊಂದರಲ್ಲೇ ಕೋವಿಡ್‌ ನಿಯಮ ಉಲ್ಲಂಘನೆಯಾದರೂ ಕ್ಯಾರೆ ಅನ್ನದೆ ಕೈ ಕಟ್ಟಿ ಕುಳಿತಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಶಿವಮೊಗ್ಗದ ಮಿಳಘಟ್ಟ ಮತ್ತು ಗೋವಿಂದಾಪುರ ಬಡಾವಣೆಯಲ್ಲಿ ಆಶ್ರಯ ಸಮಿತಿ ಮತ್ತು ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾಗಿರುವ ಮಾದರಿ ಮನೆಗಳ ವೀಕ್ಷಣೆ ಕಾರ್ಯಕ್ರಮ ನಡೆಯಿತು. ಸಚಿವ ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮೇಯರ್‌ ಸುನೀತಾ ಅಣ್ಣಪ್ಪ, ಉಪ ಮೇಯರ್‌ ಗನ್ನಿ ಶಂಕರ್‌ ಸೇರಿದಂತೆ ಹಲವು ಜನಪ್ರತಿನಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

ಕೋವಿಡ್‌ ನಿಯಮಕ್ಕೆ ಕ್ಯಾರೆ ಅನ್ನಲಿಲ್ಲ

ದೊಡ್ಡ ಸಂಖ್ಯೆಯ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆಯಿಸಲಾಗಿತ್ತು. ಬಹುತೇಕರು ಮಾಸ್ಕ್‌ ಧರಿಸಿದ್ದರೂ, ಅದು ಕೊರಳಲ್ಲಿತ್ತು. ಸಾಮಾಜಿಕ ಅಂತರವಿಲ್ಲದೆ ಫಲಾನುಭವಿಗಳಿಗೆ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು. ವೇದಿಕೆ ಮೇಲಿದ್ದವರಲ್ಲೂ ಹಲವರು ಮಾಸ್ಕ್‌ ಧರಿಸಿರಲಿಲ್ಲ. ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್‌ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಅಧಿಕಾರಿಗಳೆ ಕಾರ್ಯಕ್ರಮ ಆಯೋಜಿಸಿದ್ದರು.

ದಂಡ ಹಾಕುವವರಾರೂ ಇರಲಿಲ್ಲ..!

ಜಿಲ್ಲೆಯಲ್ಲಿ ದಿನೇ ದಿನೇ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಮಾರ್ಗಸೂಚಿಗಳ ವಿರೋಧಿಸಿ ಕಾರ್ಯಕ್ರಮ ನಡೆಸದಂತೆ ಜಿಲ್ಲಾಧಿಕಾರಿ ಶಿವಕುಮಾರ್ ಅವರು ಎಚ್ಚರಿಸಿದ್ದರು. ಈಗ ಸರ್ಕಾರಿ ಕಾರ್ಯಕ್ರಮದಲ್ಲೇ ನಿಯಮ ಉಲ್ಲಂಘನೆಯಾಗಿದ್ದು, ದಂಡ ಹಾಕಬೇಕಿದ್ದವರು ಮೌನಕ್ಕ ಜಾರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

169717526 1360955367599213 736459644734890516 n.jpg? nc cat=109&ccb=1 3& nc sid=8bfeb9& nc ohc=3XqbdW 9YmAAX9oKpZT& nc ht=scontent.fblr20 1

167399319 1360955384265878 6454294264613446520 n.jpg? nc cat=107&ccb=1 3& nc sid=8bfeb9& nc ohc= gstV9djjiIAX 1Xkb& nc ht=scontent.fblr20 1

166156627 1360955307599219 5457220611656809546 n.jpg? nc cat=101&ccb=1 3& nc sid=8bfeb9& nc ohc=xSTEuZ4EY3gAX jdy6o& nc ht=scontent.fblr20 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 5, 2021

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

Leave a Comment