| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021
ಶಿವಮೊಗ್ಗ ಜಿಲ್ಲೆಗೆ ಇವತ್ತು ಕರೋನ ಲಸಿಕೆ ಆಗಮಿಸಿದೆ. ಚಿತ್ರದುರ್ಗದ ಪ್ರಾದೇಶಿಕ ಉಗ್ರಾಣದಿಂದ ಲಸಿಕೆ ಶಿವಮೊಗ್ಗದ ಔಷಧ ಉಗ್ರಾಣಕ್ಕೆ ತಲುಪಿದೆ.
45 ಸಾವಿರ ಡೋಸ್ ಲಸಿಕೆಯನ್ನು ಶಿವಮೊಗ್ಗಕ್ಕೆ ಬಂದಿದೆ. ಜನವರಿ 16ರಿಂದ ಲಸಿಕೆ ವಿತರಣೆ ನಡೆಯಲಿದೆ.
ಚಿತ್ರದುರ್ಗದಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ಲಸಿಕೆ ತರಲಾಯಿತು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಡಿಹೆಚ್ಒ ರಾಜೇಶ್ ಸುರಗೀಹಳ್ಳಿ ಸಮ್ಮುಖದಲ್ಲಿ ಲಸಿಕೆ ಮತ್ತು ಸಿರೇಂಜ್ ಬಾಕ್ಸ್ಗಳಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಲಸಿಕೆಯನ್ನು ವಾಕಿನ್ ಕೂಲರ್ನಲ್ಲಿ ಇರಿಸಲಾಯಿತು.

ಮೊದಲ ದಿನ ಎಲ್ಲೆಲ್ಲಿ ಲಸಿಕೆ ವಿತರಣೆ?
ಜ.16ರಂದು ಶಿವಮೊಗ್ಗ ಜಿಲ್ಲೆಯ 9 ಕಡೆಯಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತದೆ. ಸಾಗರ, ಸೊರಬ, ತೀರ್ಥಹಳ್ಳಿ, ಶಿಕಾರಿಪುರ, ಭದ್ರಾವತಿ ಮತ್ತು ಹೊಸನಗರ ತಾಲೂಕಿನ ಎಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತದೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮತ್ತು ತುಂಗಾನಗರದ ಪ್ರಸೂತಿ ಕೇಂದ್ರ, ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಲಸಿಕೆ ನೀಡಲು ನಿರ್ಧರಿಸಲಾಗಿದೆ.
91 ಕೇಂದ್ರದಲ್ಲಿ ಲಸಿಕೆ
ಜ.18ರಿಂದ ಜಿಲ್ಲೆಯ 91 ಕೇಂದ್ರಗಳಲ್ಲಿ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಪ್ರತಿ ಬೂತ್ನಲ್ಲೂ ನೂರು ಜನರಿಗೆ ಲಸಿಕೆ ನೀಡಲಾಗುತ್ತದೆ.
ಇದನ್ನೂ ಓದಿ | ಶಿವಮೊಗ್ಗಕ್ಕೆ ಮೊದಲು ಬರುತ್ತೆ ಕರೋನ ಲಸಿಕೆ, ಅಕ್ಕಪಕ್ಕದ ಜಿಲ್ಲೆಗೆ ಇಲ್ಲಿಂದಲೇ ಪೂರೈಕೆ, ಹೇಗಿದೆ ಗೊತ್ತಾ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ?
ಇದನ್ನೂ ಓದಿ | ಶಿವಮೊಗ್ಗದಲ್ಲಿ ಕರೋನ ಲಸಿಕೆ ಡ್ರೈ ರನ್ ಶುರು, ಏನಿದು ಡ್ರೈ ರನ್? ಎಲ್ಲೆಲ್ಲಿ ಆಗ್ತಿದೆ? ಯಾರೆಲ್ಲ ಭಾಗವಹಿಸಿದ್ದಾರೆ?
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()