ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 02 JANUARY 2021
ಶಿವಮೊಗ್ಗದಲ್ಲಿ ಇವತ್ತು ಕರೋನ ಲಸಿಕೆ ತಾಲೀಮು (ಡ್ರೈ ರನ್) ನಡೆಯಿತು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಡ್ರೈ ರನ್ಗೆ ಚಾಲನೆ ನೀಡಿದರು.
ಏನಿದು ಡ್ರೈ ರನ್?
ಕೋವಿಡ್ ಲಸಿಕೆ ಬಂದಾಗ ಅದನ್ನು ಹಾಕುವ ಕುರಿತು ಕೈಗೊಂಡಿರುವ ಸಿದ್ಧತೆ ಕಾರ್ಯಗಳ ಪರಿಶೀಲನೆಗೆ ತಾಲೀಮು ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ, ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿಗಳನ್ನು ಇದರಲ್ಲಿ ಭಾಗಿಯಾಗಿದ್ದಾರೆ.
ಎಲ್ಲೆಲ್ಲಿ ನಡೆಯುತ್ತಿದೆ ಡ್ರೈ ರನ್
- ಶಿವಮೊಗ್ಗ ಜಿಲ್ಲೆಯ ಮೂರು ಕಡೆಯಲ್ಲಿ ಲಸಿಕೆ ತಾಲೀಮು ನಡೆಯುತ್ತಿದೆ.
- ಶಿವಮೊಗ್ಗ ಸಿಟಿಯಲ್ಲಿ ಮೆಡಿಕಲ್ ಕಾಲೇಜು ಆವರಣ
- ಶಿಕಾರಿಪುರದ ತಾಲೂಕು ಆಸ್ಪತ್ರೆ
- ಭದ್ರಾವತಿ ತಾಲೂಕು ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರ
ಹೇಗೆ ನಡೆಯುತ್ತೆ ಡ್ರೈ ರನ್?
ಡ್ರೈ ರನ್ಗೆ ಪ್ರತಿ ಕೇಂದ್ರದಲ್ಲಿ 25 ಮಂದಿ ಭಾಗಿಯಾಗಿದ್ದಾರೆ. ಜಿಲ್ಲೆಯ ಮೂರು ಕೇಂದ್ರದಲ್ಲಿ 75 ಮಂದಿ ಆರೋಗ್ಯ ಇಲಾಖೆ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ವೈದ್ಯರು, ಸಪೋರ್ಟಿಂಗ್ ಟೀಂ ಸೇರಿ 50 ಮಂದಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯ 20 ಸಾವಿರ ಮಂದಿಗೆ ಮೊದಲ ಹಂತದಲ್ಲಿ ಕರೋನ ಲಸಿಕೆ, ಯಾರಿಗೆಲ್ಲ ಸಿಗುತ್ತೆ ಲಸಿಕೆ? ಪೂರೈಕೆ ಹೇಗೆ?
ಡ್ರೈ ರನ್ಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂರು ಪ್ರತ್ಯೇಕ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.
ಕೊಠಡಿ 1 : ನಿರೀಕ್ಷಾಣ ರೂಂ – ಲಸಿಕೆ ಪಡೆಯಲು ಬಂದವರ ಮಾಹಿತಿ ಆನ್ಲೈನ್ಗೆ ಅಪ್ಲೋಡ್
ಕೊಠಡಿ 2 : ಚುಚ್ಚುಮದ್ದು ಕೊಠಡಿ – ಇಲ್ಲಿ ಫಲಾನುಭವಿಗಳಿಗೆ ಲಸಿಕೆ ನೀಡಲಾಗುತ್ತದೆ.
ಕೊಠಡಿ 3 : ಪರೀಕ್ಷಾ ಕೊಠಡಿ – ಲಸಿಕೆ ಪಡೆದ ಫಲಾನುಭವಿಗಳನ್ನು ಕೆಲ ಹೊತ್ತು ವಿಶ್ರಾಂತಿಗೆ ಸೂಚಿಸಿ, ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಅಡ್ಡ ಪರಿಣಾಮಗಳು ಉಂಟಾದಲ್ಲಿ ಕೂಡಲೇ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ.
ಇದನ್ನೂ ಓದಿ | ಶಿವಮೊಗ್ಗಕ್ಕೆ ಮೊದಲು ಬರುತ್ತೆ ಕರೋನ ಲಸಿಕೆ, ಅಕ್ಕಪಕ್ಕದ ಜಿಲ್ಲೆಗೆ ಇಲ್ಲಿಂದಲೇ ಪೂರೈಕೆ, ಹೇಗಿದೆ ಗೊತ್ತಾ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ?
ಮೆಗ್ಗಾನ್ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ, ಆರೋಗ್ಯ ಇಲಾಖೆ, ಸಿಮ್ಸ್ ಆಡಳಿತ ಮಂಡಳಿ, ಅಧಿಕಾರಿಗಳ ತಂಡ ಡ್ರೈ ರನ್ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಡ್ರೈ ರನ್ ಕಾರ್ಯದ ಪರಿಶೀಲನೆ ನಡೆಸಿದರು.
ಇದನ್ನೂ ಓದಿ | ಶಿವಮೊಗ್ಗದ ನಾಲ್ಕು ಮಂದಿಯಲ್ಲಿ ರೂಪಾಂತರಿ ಕರೋನ ವೈರಸ್ ಪತ್ತೆ
ಇದನ್ನೂ ಓದಿ | ಶಿವಮೊಗ್ಗದಲ್ಲಿ ಬ್ರಿಟನ್ ವೈರಸ್, ಆರೋಗ್ಯ ಇಲಾಖೆ ಅಧಿಕಾರಿಗಳ ಮುಂಜಾಗ್ರತೆಯಿಂದ ತಪ್ಪಿತು ದೊಡ್ಡ ಅನಾಹುತ
ಇದನ್ನೂ ಓದಿ | ಶಿವಮೊಗ್ಗದಲ್ಲಿ ರೂಪಾಂತರಿ ವೈರಸ್, ಮನೆ ಮತ್ತೊಮ್ಮೆ ಸ್ಯಾನಿಟೈಸ್, ನಾಲ್ವರು ವಿದೇಶದಿಂದ ಬಂದಿದ್ಯಾವಾಗ?
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200