SHIVAMOGGA LIVE NEWS | 9 AUGUST 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಕಾರ್ಪೊರೇಟ್ ಕಂಪನಿಗಳೆ (Corporate Companies) ಭಾರತ ಬಿಟ್ಟು ತೊಲಗಿ, ಕೃಷಿ ಭೂಮಿ ಉಳಿಸಿ ಘೋಷಣೆಯೊಂದಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ರಾಜ್ಯ ವರಿಷ್ಠ ಕೆ.ಟಿ.ಗಂಗಾಧರ್ (K.T. Gangadhar) ಅವರ ನೇತೃತ್ವದಲ್ಲಿ ರೈತರು ಪ್ರತಿಭಟನೆ ಮಾಡಿದರು.
ಕೃಷಿ ಕ್ಷೇತ್ರ ಭಾರತದಲ್ಲಿ ಶೇ.60ರಷ್ಟು ಉದ್ಯೋಗ ಸೃಷ್ಟಿ ಮಾಡಿದೆ. ಆದರೆ ಕಾರ್ಪೊರೇಟ್ ಕಂಪನಿಗಳು ಲಗ್ಗೆ ಇಟ್ಟು (Agriculture) ವ್ಯವಸ್ಥೆಯನ್ನು ಹಾಳುಗೆಡವುತ್ತಿವೆ. ಯಂತ್ರೋಪಕರಣ, ಅತಿಯಾದ ರಸಗೊಬ್ಬರ ಮತ್ತು ಕೀಟನಾಶಕ ಬಳಕೆ ಮಾಡುತ್ತಿವೆ. ಇದು ಈ ದೇಶದ ಕೃಷಿ ಪದ್ಧತಿಗೆ ವಿರುದ್ಧವಾದದ್ದು. ಕೃಷಿ ಉತ್ಪಾದನೆಯನ್ನು ವ್ಯಾಪಾರ ಉದ್ಯಮವಾಗಿ ನಡೆಸುವುದು ಸೇರಿದಂತೆ ಕಾರ್ಪೊರೇಟ್ ಸಂಸ್ಥೆಗಳು ಹಲವು ಸಮಸ್ಯೆ ಸೃಷ್ಟಿಸಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇದನ್ನೂ ಓದಿ-‘ರೈತರ ಮಕ್ಕಳು ವಿದ್ಯಾವಂತರಾಗುವುದು ಸಿದ್ದರಾಮಯ್ಯಗೆ ಇಷ್ಟವಿಲ್ಲʼ, ಶಿವಮೊಗ್ಗದಲ್ಲಿ ಬೀದಿಗಿಳಿದ ಬಿಜೆಪಿ, ಆಕ್ರೋಶ
ಇದೇ ವೇಳೆ ಮಾತನಾಡಿದ ರೈತ ಮುಖಂಡ ಕೆ.ಟಿ.ಗಂಗಾಧರ್, 1942ರ ಆಗಸ್ಟ್ 9ರಂದು ಗಾಂಧೀಜಿಯವರು ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ ಚಳವಳಿ ಆರಂಭಿಸಿದ್ದರು. ಇವತ್ತು ದೇಶದ ಕೃಷಿ ಪದ್ಧತಿಗೆ ಮಾರಕವಾಗಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂದು ಘೋಷಣೆಯೊಂದಿಗೆ ಹೋರಾಟ ಆರಂಭಿಸಿದ್ದೇವೆ ಎಂದು ತಿಳಿಸಿದರು.
ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ, ಗೌರವಾಧ್ಯಕ್ಷ ಈರಪ್ಪ ಪ್ಯಾಟಿ, ಜಿಲ್ಲಾಧ್ಯಕ್ಷ ಹಾಲೇಶಪ್ಪ ಗೌಡ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥೇಶ್ವರ, ಕೆ.ಎಸ್.ಪುಟ್ಟಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






