ಭಾರತ ಬಿಟ್ಟು ತೊಲಗಿ, ರೈತರು, ಕೃಷಿ ಪದ್ಧತಿ ಉಳಿಸಿ, ಶಿವಮೊಗ್ಗದಲ್ಲಿ ಅನ್ನದಾತರ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 9 AUGUST 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಕಾರ್ಪೊರೇಟ್‌ ಕಂಪನಿಗಳೆ (Corporate Companies) ಭಾರತ ಬಿಟ್ಟು ತೊಲಗಿ, ಕೃಷಿ ಭೂಮಿ ಉಳಿಸಿ ಘೋಷಣೆಯೊಂದಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ರಾಜ್ಯ ವರಿಷ್ಠ ಕೆ.ಟಿ.ಗಂಗಾಧರ್‌ (K.T. Gangadhar) ಅವರ ನೇತೃತ್ವದಲ್ಲಿ ರೈತರು ಪ್ರತಿಭಟನೆ ಮಾಡಿದರು.

ಕೃಷಿ ಕ್ಷೇತ್ರ ಭಾರತದಲ್ಲಿ ಶೇ.60ರಷ್ಟು ಉದ್ಯೋಗ ಸೃಷ್ಟಿ ಮಾಡಿದೆ. ಆದರೆ ಕಾರ್ಪೊರೇಟ್‌ ಕಂಪನಿಗಳು ಲಗ್ಗೆ ಇಟ್ಟು (Agriculture) ವ್ಯವಸ್ಥೆಯನ್ನು ಹಾಳುಗೆಡವುತ್ತಿವೆ. ಯಂತ್ರೋಪಕರಣ, ಅತಿಯಾದ ರಸಗೊಬ್ಬರ ಮತ್ತು ಕೀಟನಾಶಕ ಬಳಕೆ ಮಾಡುತ್ತಿವೆ. ಇದು ಈ ದೇಶದ ಕೃಷಿ ಪದ್ಧತಿಗೆ ವಿರುದ್ಧವಾದದ್ದು. ಕೃಷಿ ಉತ್ಪಾದನೆಯನ್ನು ವ್ಯಾಪಾರ ಉದ್ಯಮವಾಗಿ ನಡೆಸುವುದು ಸೇರಿದಂತೆ ಕಾರ್ಪೊರೇಟ್‌ ಸಂಸ್ಥೆಗಳು ಹಲವು ಸಮಸ್ಯೆ ಸೃಷ್ಟಿಸಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇದನ್ನೂ ಓದಿ-‘ರೈತರ ಮಕ್ಕಳು ವಿದ್ಯಾವಂತರಾಗುವುದು ಸಿದ್ದರಾಮಯ್ಯಗೆ ಇಷ್ಟವಿಲ್ಲʼ, ಶಿವಮೊಗ್ಗದಲ್ಲಿ ಬೀದಿಗಿಳಿದ ಬಿಜೆಪಿ, ಆಕ್ರೋಶ

ಇದೇ ವೇಳೆ ಮಾತನಾಡಿದ ರೈತ ಮುಖಂಡ ಕೆ.ಟಿ.ಗಂಗಾಧರ್‌, 1942ರ ಆಗಸ್ಟ್‌  9ರಂದು ಗಾಂಧೀಜಿಯವರು ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ ಚಳವಳಿ ಆರಂಭಿಸಿದ್ದರು. ಇವತ್ತು ದೇಶದ ಕೃಷಿ ಪದ್ಧತಿಗೆ ಮಾರಕವಾಗಿರುವ ಕಾರ್ಪೊರೇಟ್‌ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂದು ಘೋಷಣೆಯೊಂದಿಗೆ ಹೋರಾಟ ಆರಂಭಿಸಿದ್ದೇವೆ ಎಂದು ತಿಳಿಸಿದರು.

ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್‌ ಘೋರ್ಪಡೆ, ಗೌರವಾಧ್ಯಕ್ಷ ಈರಪ್ಪ ಪ್ಯಾಟಿ, ಜಿಲ್ಲಾಧ್ಯಕ್ಷ ಹಾಲೇಶಪ್ಪ ಗೌಡ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥೇಶ್ವರ, ಕೆ.ಎಸ್.ಪುಟ್ಟಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment