
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟಂಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕುಡಿಯುವ ನೀರು ಪೂರೈಕೆ ವಿಚಾರವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ತೀವ್ರ ಗದ್ದಲ ನಿರ್ಮಾಣಾಯಿತು. ಆಡಳಿತ ಮತ್ತು ಪ್ರತಿಪಕ್ಷದ ಮುಖಂಡರ ನಡುವೆ ವಾಗ್ವಾದ ನಡೆಯಿತು.
ಕಾಂಗ್ರೆಸ್ ಕಾರ್ಪೊರೇಟರ್ಗಳಾದ ಯಮುನಾ ರಂಗೇಗೌಡ, ರೇಖಾ ರಂಗನಾಥ್ ಮತ್ತು ಮೆಹಕ್ ಷರೀಫ್ ಅವರು ತಮ್ಮ ವಾರ್ಡ್ನಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು. ಅಲ್ಲದೆ ನೀರಿನ ಸಮಸ್ಯೆ ಬಗೆಹರಿಸದ ಆಡಳಿತ ವ್ಯವಸ್ಥೆಗೆ ಧಿಕ್ಕಾರ ಎಂದು ಬರೆದಿರುವ ಫ್ಲೇಕರ್ಗಳನ್ನು ಹಿಡಿದು, ಮೇಯರ್ ಟೇಬಲ್ ಮುಂಭಾಗ ಘೋಷಣೆ ಕೂಗಿದರು.
ಮಾತಿಗೆ ಮಾತು, ‘ಮರ್ಯಾದೆ’ಯ ಎಚ್ಚರಿಕೆ
ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಸಮಸ್ಯೆಯಾಗುತ್ತಿದೆ. ಅಧಿಕಾರಿಗಳಿಗೆ ಕರೆ ಮಾಡಿದರೆ ನೀರು ಪೂರೈಕೆ ಮಾಡಲಾಗುತ್ತದೆ ಅನ್ನುತ್ತಾರೆ. ಅದರೆ ಟ್ಯಾಂಕ್ಗೆ ನೀರು ಸರಿಯಾಗಿ ಭರ್ತಿಯಾಗುತ್ತಿಲ್ಲ. ಸಾಮಾನ್ಯ ಸಭೆಗಳಿದ್ದಾಗಷ್ಟೇ ಟ್ಯಾಂಕ್ಗೆ ನೀರು ತುಂಬಿಸಲಾಗುತ್ತಿದೆ ಎಂದು ಯಮುನಾ ರಂಗೇಗೌಡ ಆರೋಪಿಸಿದರು.
ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷದ ಕಾರ್ಪೊರೇಟರ್ಗಳ ನಡುವೆ ಮಾತಿಗೆ ಮಾತು ಬೆಳೆಯಿತು. ಒಂದು ಹಂತದಲ್ಲಿ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ಅವರು ತಮ್ಮೊಂದಿಗೆ ಮರ್ಯಾದೆಯಿಂದ ಮಾತಾಡಬೇಕು ಎಂದು ಯಮುನಾ ರಂಗೇಗೌಡ ಅವರಿಗೆ ಸೂಚಿಸಿದರು. ಈ ವೇಳೆ ಗಲಾಟೆ ಮತ್ತಷ್ಟು ಜೋರಾಯಿತು.
ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್ ಅವರು ವಿರೋಧ ಪಕ್ಷದ ಕಾರ್ಪೊರೇಟರ್ಗಳ ಮಾತು ಆಲಿಸಿ ಸಮಸ್ಯೆ ಬಗೆಹರಿಸಿ ಎಂದರು.
ನಾಳೆಯೆ ಪರಿಶೀಲನೆ ಮಾಡೋಣ
ಈ ನಡುವೆ ಅಧಿಕಾರಿಗಳಿಂದ ಮಾಹಿತಿ ಪಡೆದ ಮೇಯರ್, ಬಳಿಕ ತಮ್ಮ ವಾರ್ಡ್ಗಳಿಗೆ ಭೇಟಿ ನೀಡಿವುದಾಗಿ ಭರವಸೆ ನೀಡಿದರು. ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಮೇಯರ್ ಸುವರ್ಣ ಶಂಕರ್ ಭರವಸೆ ನೀಡಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






