ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020
ಅಮೃತ್ ಯೋಜನೆ ಅಡಿಯಲ್ಲಿ ನಗರದ ರಾಜಾಕಾಲುವೆಗಳ ದುರಸ್ತಿ ಕಾರ್ಯ ಇದುವರೆಗೂ ಪೂರ್ಣಗೊಂಡಿಲ್ಲ ಎಂದು ಮಹಾ ನಗರ ಪಾಲಿಕೆ ವಿಪಕ್ಷ ನಾಯಕ ಹೆಚ್.ಸಿ.ಯೋಗೀಶ್ ಆರೋಪಿಸಿದರು.
ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ, ರಾಜಾಕಾಲುವೆಗಳ ದುರಸ್ತಿ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದ ಅವರು, ರಾಜಕಾಲು ವೆಗಳನ್ನು ರಿಪೇರಿಗೊಳಿಸುವ ಕಾರ್ಯ ಕಳೆದ ನಾಲ್ಕು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿವೆ ಎಂದು ದೂರಿದರು.
ಇತ್ತೀಚಿನ ದಿನಗಳಲ್ಲಿ ಅಲ್ಪ ಮಳೆಗೂ ಸಹ ರಾಜಾಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯದೆ ಮನೆಗಳಿಗೆ ನುಗ್ಗುತ್ತಿದ್ದು, ರಾಜಾ ಕಾಲುವೆಗಳ ದುರಸ್ತಿ ಕಾಮಗಾರಿ ಸರಿಯಾಗಿ ನಡೆಯದ ಕಾರಣ ಅವ್ಯವಸ್ಥೆಗೆ ಜನ ಒದ್ದಾಡುವ ಹಾಗೆ ಆಗಿದೆ ಎಂದರು.
ಯೋಗೀಶ್ ನೇತೃತ್ವದ ತಂಡದಲ್ಲಿ ಆರ್.ಸಿ ನಾಯ್ಕ್, ಯಮುನಾ ರಂಗೇಗೌಡ, ರೇಖಾರಂಗನಾಥ್ ಸೇರಿದ ಪಾಲಿಕೆ ಸದಸ್ಯರನ್ನೊಳಗೊಂಡ ನಿಯೋಗ ಹೊಸಮನೆ 6 ನೇ ಅಡ್ಡರಸ್ತೆ, 1 ನೇ ಮುಖ್ಯರಸ್ತೆಯ ರಾಜಕಾಲುವೆ, ಜೆಪಿಎನ್ ನಗರ, ಟಿಪ್ಪುನಗರ, ಶ್ರೀರಾಮ ನಗರ, ಶಾಂತಮ್ಮ ಲೇಔಟ್ ಹಾಗೂ ಮಹಾದೇವಿ ನಗರದ ರಾಜಕಾಲುವೆಗಳಿಗೆ ಭೇಟಿ ನಿಡಿ ಪರಿಶೀಲನೆ ನಡೆಸಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200