ಶಿವಮೊಗ್ಗ ಪಾಲಿಕೆ, ಕೈ ಬಿಸಿ ಮಾಡಿದರಷ್ಟೆ ಕೆಲಸ, ಏನಾಗ್ತಿದೆ ಪೌರ ಸಂಸ್ಥೆಯಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS, 18 JANUARY 2025

ಶಿವಮೊಗ್ಗ : ಸರ್ವ ಸಮಸ್ಯೆ ನೀಗಿಸಬೇಕಿದ್ದ ಮಹಾನಗರ ಪಾಲಿಕೆಯೆ (Palike) ಈಗ ನಗರದ ನಾಗರಿಕರ ಪಾಲಿಗೆ ಅತಿದೊಡ್ಡ ಸಮಸ್ಯೆಯಾಗಿದೆ. ಅಧಿಕಾರಿಗಳ ಕೈ ಬಿಸಿ ಮಾಡದೆ, ಮಧ್ಯವರ್ತಿಗಳ ಜೇಬು ಭರ್ತಿ ಮಾಡದೆ ಇದ್ದರೆ ಸಣ್ಣಪುಟ್ಟ ಕೆಲಸವು ಆಗದ ದುಸ್ಥಿತಿ ಇದೆ. ಸಾಲು ಸಾಲು ಲೋಕಾಯುಕ್ತ ದಾಳಿ, ಜನಪ್ರತಿನಿಧಿಗಳ ಆರೋಪ ಪಾಲಿಕೆಯೊಳಗಿನ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ.

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನೋಟು ತೋರಿಸದೆ ಕೆಲಸಗಳು ನಡೆಯುವುದಿಲ್ಲ. ಜನ ಹತ್ತಾರು ಬಾರಿ ಓಡಾಡಿ, ಹಣ ಚೆಲ್ಲಿದರಷ್ಟೆ ಫೈಲುಗಳು ಮುಂದಕ್ಕೆ ಸಾಗಲಿವೆ. ಇದರಿಂದ ಮುಕ್ತಿ ನೀಡುವಂತೆ ಜನರು ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳ ಕಚೇರಿಗೆ ಅಲೆಯುವಂತಾಗಿದೆ. ಆದರೆ ಸೂಕ್ತ ಪರಿಹಾರ ಸಿಗದೆ ಪರಿತಪಿಸುತ್ತಿದ್ದಾರೆ.

Shimoga-Mahanagara-Palike-ambedkar-statue

‘ಅಧಿಕಾರಿಗಳಿಗೆ ಅಡ್ಡ ಹೆಸರಿಟ್ಟಿದ್ದಾರೆʼ

K B Prasanna Kumar, former mla shimoga

ಈಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌, ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳಿಗೆ ದಿನವು ದಸರಾ ಹಬ್ಬದಂತಾಗಿದೆ. ಹಣವಿಲ್ಲದೆ ಯಾವುದೇ ಕೆಲಸವು ಆಗುತ್ತಿಲ್ಲ. ಇದೇ ಕಾರಣಕ್ಕೆ ಜನರು ಅಧಿಕಾರಿಗಳಿಗೆ ಅಡ್ಡ ಹೆಸರುಗಳನ್ನು ಇಟ್ಟಿದ್ದಾರೆ. ಒಬ್ಬ ಅಧಿಕಾರಿಗೆ ಜನ ಕೊಕ್ಕೆ ಎಂದು ಕರೆಯುತ್ತಾರೆ. ಅದರ ಅರ್ಥವೇನು ತಿಳಿಯದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಆಯುಕ್ತರ ವಿರುದ್ಧ ದೂರು

ಪಾಲಿಕೆಯ ವಿರೋಧ ಪಕ್ಷದ ಮಾಜಿ ನಾಯಕ ಹೆಚ್‌.ಸಿ.ಯೋಗೇಶ್‌ ಕೂಡ ಇಲ್ಲಿನ ಭ್ರಷ್ಟಾಚಾರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

HC Yogesh, Former Corporator

ಪಾಲಿಕೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಯಾವುದೇ ಕೆಲಸಕ್ಕು ಅಧಿಕಾರಿಗಳು ದುಡ್ಡು ಕೇಳುತ್ತಾರೆ. ಪಾಲಿಕೆಯಲ್ಲಿನ ಭ್ರಷ್ಟಾಚಾರ, ಅಧಿಕಾರಿಗಳ ವರ್ಗಾವಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಶಿವಮೊಗ್ಗದಲ್ಲಿ ಸಚಿವ ಎಂ.ಬಿ.ಪಾಟೀಲ್‌ ಅವರಿಗೆ ದೂರು ನೀಡುತ್ತೇವೆ.

– ಹೆಚ್‌.ಸಿ.ಯೋಗೇಶ್‌, ಪಾಲಿಕೆ ಮಾಜಿ ಸದಸ್ಯ

RED-LINE-

ಪದೇ ಪದೆ ಲೋಕಾಯುಕ್ತ ದಾಳಿ

lokayukta-officials-raid-on-shimoga-mahanagara-palike

ಸಾಲು ಸಾಲು ಆರೋಪಗಳ ಬೆನ್ನಿಗೆ, ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಪಾಲಿಕೆಯ ಸಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಸಿದ್ದೇಶ್‌ ಜ.16ರಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿದ್ದೇಶ್‌ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆದರೆ ಇದೇನು ಹೊಸತಲ್ಲ. ಕಳೆದ ವರ್ಷದ ಫೆಬ್ರವರಿಯಲ್ಲಿ ಜನನ, ಮರಣ ಪ್ರಮಾಣಪತ್ರ ವಿಭಾಗದ ಮೇಲೆ ಲೋಕಾಯುಕ್ತ ದಾಳಿಯಾಗಿತ್ತು. 2023ರ ಏಪ್ರಿಲ್‌ನಲ್ಲಿ ಕಂದಾಯ ವಿಭಾಗದ ಮೇಲೆ ಲೋಕಾಯುಕ್ತ ದಾಳಿಯಾಗಿ ರೆವಿನ್ಯು ಇನ್ಸ್‌ಪೆಕ್ಟರ್‌ ಬಂಧನವಾಗಿತ್ತು. ಸಾಲು ಸಾಲು ದಾಳಿ, ಪರಿಶೀಲನೆ, ಅಧಿಕಾರಿಗಳ ಬಂಧನವಾದರು ಲಂಚಗುಳಿತನಕ್ಕೆ ಬ್ರೇಕ್‌ ಬಿದ್ದಿಲ್ಲ.

ಮಿನಿಸ್ಟರ್‌ ಭೇಟಿ ವೇಳೆ ನರಕ ದರ್ಶನ

Minister-Byrathi-Suresh-sudden-visit-to-Shimoga-Palike

ನವೆಂಬರ್‌ ತಿಂಗಳಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಮಹಾನಗರ ಪಾಲಿಕೆಗೆ ದಿಢೀರ್‌ ಭೇಟಿ ನೀಡಿದ್ದರು. ಆಗ ಸಚಿವರಿಗೆ ಪಾಲಿಕೆಯಲ್ಲಿನ ನರಕ ದರ್ಶನವಾಗಿತ್ತು. ಕೆಲಸಗಳು ವಿಳಂಬವಾಗುತ್ತಿರುವುದು, ಸರ್ವರ್‌ ಸಮಸ್ಯೆಯ ಕುರಿತು ಜನ ದೂರಿದ್ದರು. ಎಲ್ಲವು ಬದಲಾಗಬೇಕು ಎಂದು ಸಚಿವರು ಎಚ್ಚರಿಕೆ ನೀಡಿ ತೆರಳಿದ್ದರು. ಆದರೆ ಬದಲಾಗಿದ್ದು ಲಂಚದ ರೇಟುಗಳ ಮಾತ್ರ ಅನ್ನುತ್ತಾರೆ ಸಾರ್ವಜನಿಕರು.

ಶಿವಮೊಗ್ಗ ಮಹಾನಗರ ಪಾಲಿಕೆಗೆ ಮೇಜರ್‌ ಸರ್ಜರ್‌ ಆದರಷ್ಟೆ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯ. ಇಲ್ಲವಾದಲ್ಲಿ ಜನ ಹಣ ಕೊಟ್ಟು ಕೆಲಸ ಮಾಡಿಸಿಕೊಳ್ಳುವ ದುಸ್ಥಿತಿ ಮುಂದುವರೆಯಲಿದೆ.

Abhishek-padavidhara-sahakara-sanga

ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದಲ್ಲಿ ಪೊಲೀಸರಿಂದ ರಾತ್ರಿ ದಿಢೀರ್‌ ಏರಿಯಾ ಡಾಮಿನೇಷನ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 18, 2025

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

Leave a Comment