ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 17 SEPTEMBER 2024 : ರಸ್ತೆ ಅಭಿವೃದ್ಧಿಗಾಗಿ ವ್ಯಕ್ತಿಯೊಬ್ಬರ ಭೂಮಿ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿ (Confiscate) ಮಾಡುವಂತೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಅಗಡಿ ಆಶೋಕ್ ಎಂಬುವರಿಗೆ ಸೇರಿದ ನಿವೇಶನದ ಸ್ವಲ್ಪ ಭಾಗವನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಕೆ-ಶಿಪ್) 2011ರಲ್ಲಿ ವಶಪಡಿಸಿಕೊಂಡಿತ್ತು. ನಿವೇಶನಕ್ಕೆ ಸಂಬಂಧಿಸಿ ಕಾನೂನುಬದ್ಧವಾಗಿ ಪರಿಹಾರ ನೀಡಿಲ್ಲ ಎಂದು ನಿವೇಶನದ ಮಾಲೀಕ ಅಗಡಿ ಅಶೋಕ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೈಕೋರ್ಟ್ ನಿರ್ದೇಶನದಂತೆ ಅಗಡಿ ಅಶೋಕ್ ಅವರಿಗೆ ಮೂರು ತಿಂಗಳ ಒಳಗೆ 3.93 ಕೋಟಿ ರೂ. ಸೇರಿ ಒಟ್ಟು 4.44 ಕೋಟಿ ರೂ. ಪರಿಹಾರ ನೀಡುವಂತೆ ಸೂಚಿಸಲಾಗಿತ್ತು.» ಏನಿದು ಪ್ರಕರಣ?


ಪರಿಹಾರ ವಿಳಂಬ, ಚರಾಸ್ತಿ ಜಪ್ತಿಗೆ ಆದೇಶ
ಪರಿಹಾರ ನೀಡುವಲ್ಲಿ ವಿಳಂಬವಾದ ಹಿನ್ನೆಲೆ ಜಿಲ್ಲಾ ನ್ಯಾಯಾಲಯವು ಜಿಲ್ಲಾಧಿಕಾರಿ ಕಚೇರಿಯ ಚರಾಸ್ತಿಯಾದ ಪೀಠೋಪಕರಣ ಜಪ್ತಿ ಮಾಡಬೇಕು. ಮುಂದಿನ ಆದೇಶದವರೆಗೆ ವಶಕ್ಕೆ ಪಡೆಯುವಂತೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ದೂರುದಾರರ ಪರವಾಗಿ ಸೊರಬ ವಕೀಲ ಪಿ.ವಿ.ಖರೆ ಹಾಗೂ ದಿನಕರ್ ಭಟ್ ಭಾವೆ ವಾದ ಮಂಡಿಸಿದ್ದರು.

ಇದನ್ನೂ ಓದಿ » ದಿಢೀರ್ ಬಲಕ್ಕೆ ತಿರುಗಿದ ಲಾರಿ, ಬೈಕ್ ಸವಾರ ಮೆಗ್ಗಾನ್ಗೆ ದಾಖಲು – 3 ಫಟಾಫಟ್ ನ್ಯೂಸ್
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು














