BREAKING NEWS | ಶಿವಮೊಗ್ಗದಲ್ಲಿ ಕರೋನ ಆತಂಕ, ಓಂ ಶಕ್ತಿ ಯಾತ್ರೆ ಮುಗಿಸಿ ಬಂದವರಿಗೆ ಹೋಂ ಕ್ವಾರಂಟೈನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS |  5 ಜನವರಿ 2022

ಕೆಲ ತಿಂಗಳಿಂದ ತಗ್ಗಿದ್ದ ಕರೋನ ಪ್ರಕರಣಗಳು ನಿಧಾನಕ್ಕೆ ಹೆಚ್ಚಳವಾಗುತ್ತಿವೆ. ಮೂರನೆ ಅಲೆ ಬಗ್ಗೆ ಜನರಲ್ಲಿ ಆತಂಕ ಮೂಡಿದೆ. ಈ ಮಧ್ಯೆ ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ ಸಾವಿರಾರು ಮಹಿಳೆಯರು ಇವತ್ತು ಶಿವಮೊಗ್ಗಕ್ಕೆ ಮರಳುತ್ತಿದ್ದಾರೆ. ಇದು ಕೋವಿಡ್ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮತ್ತೊಂದೆಡೆ ಓಂ ಶಕ್ತಿಗೆ ತೆರಳಿದ್ದ ಮಹಿಳೆಯರು ಶಿವಮೊಗ್ಗಕ್ಕೆ ಪ್ರವೇಶಿಸುತ್ತಿದ್ದಂತೆ ಸ್ಕ್ರೀನಿಂಗ್ ಕಾರ್ಯ ನಡೆಸಲಾಗುತ್ತಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ತಮಿಳುನಾಡಿನಿಂದ ಶಿವಮೊಗ್ಗಕ್ಕೆ ಮರಳುತ್ತಿರುವ ಬಸ್ಸುಗಳನ್ನು ಸಹ್ಯಾದ್ರಿ ಕಾಲೇಜು ಬಳಿ ತಡೆದು ತಪಾಸಣೆ ನಡೆಸಲಾಗುತ್ತಿದೆ. ಬಸ್ಸಿನಲ್ಲಿರುವ ಮಹಿಳೆಯರ ಕರೋನ ಸ್ಕ್ರೀನಿಂಗ್ ಕಾರ್ಯ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ತಪಾಸಣೆ ನಡೆಸುತ್ತಿದ್ದಾರೆ.

ಐದು ಸಾವಿರಕ್ಕೂ ಅಧಿಕ ಮಹಿಳೆಯರು

ಶಿವಮೊಗ್ಗದಿಂದ ಪ್ರತಿ ವರ್ಷ ಸಾವಿರಾರು ಮಹಿಳೆಯರು ಓಂ ಶಕ್ತಿ ಮಾಲೆ ಧರಿಸಿಕೊಂಡು ದೇವರ ದರ್ಶನಕ್ಕೆ ತೆರಳುತ್ತಾರೆ. ತಮಿಳುನಾಡಿನ ಮೇಲ್ ಮರತ್ತೂರಿಗೆ ಧಾರ್ಮಿಕ ಪ್ರವಾಸ ಕೈಗೊಂಡು ಮರಳುತ್ತಾರೆ. ಈ ಭಾರಿ ಶಿವಮೊಗ್ಗದಿಂದ ಸುಮಾರು ಐದು ಸಾವಿರ ಮಹಿಳೆಯರು ಓಂ ಶಕ್ತಿ ದರ್ಶನಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಡಿ.31ರಂದು ಪ್ರವಾಸ ಆರಂಭಿಸಿದ್ದ ಮಹಿಳೆಯರು ಇವತ್ತು ಹಿಂತಿರುಗುತ್ತಿದ್ದಾರೆ.

ಮಂಡ್ಯದಲ್ಲಿ 30 ಮಹಿಳೆಯರಿಗೆ ಪಾಸಿಟಿವ್

ಓಂ ಶಕ್ತಿ ದರ್ಶನ ಪಡೆದು ಮಂಡ್ಯ ಜಿಲ್ಲೆಗೆ ಮರಳಿದ 30ಕ್ಕೂ ಅಧಿಕ ಮಹಿಳೆಯರಿಗೆ ಕರೋನ ಪಾಸಿಟಿವ್ ಬಂದಿದೆ. ಇದು ಶಿವಮೊಗ್ಗ ಜಿಲ್ಲೆಯ ಜನರಲ್ಲಿ ಭೀತಿಗೆ ಕಾರಣವಾಗಿದೆ. ಹಾಗಾಗಿ ಈ ಮಹಿಳೆಯರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

AVvXsEipmQ80ATCwYwXyN56ltMdTm5EcHJ7jopMmQLsUdV5SnuCS N Dr1z ts97jKu BfW3Rrogy9h2nWtEUHo7vdSTwFKP31FL5bLLkyY3c1B0G9oEYwgWPE5DlMF Ba1sXSJJSnKuEPzQFvz0mOIPdGoc4SzSm7t5

ಸಹ್ಯಾದ್ರಿ ಕಾಲೇಜು ಬಳಿ ಸ್ಕ್ರೀನಿಂಗ್

ಶಿವಮೊಗ್ಗ, ಭದ್ರಾವತಿ ಡಿಪೋದಿಂದ ಸುಮಾರು ನೂರು ಬಸ್ಸುಗಳಲ್ಲಿ ಮಹಿಳೆಯರು ಓಂ ಶಕ್ತಿ ದರ್ಶನಕ್ಕೆ ತೆರಳಿದ್ದರು. ಅವರೆಲ್ಲ ಇವತ್ತು ಬೆಳಗ್ಗೆಯಿಂದ ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದಾರೆ. ಹಾಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಬೆಳಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಓಂ ಶಕ್ತಿ ದರ್ಶನಕ್ಕೆ ತೆರಳಿದ್ದವರ ಬಸ್ಸುಗಳು ಬರುತ್ತಿದ್ದಂತೆ, ಅವುಗಳನ್ನು ಸಹ್ಯಾದ್ರಿ ಕಾಲೇಜು ಬಳಿ ತಡೆದು ನಿಲ್ಲಿಸಲಾಗುತ್ತಿದೆ. ಬಸ್ಸಿನಲ್ಲಿರುವ ಪ್ರತಿ ಮಹಿಳೆಯನ್ನು ತಪಾಸಣೆ ಮಾಡಲಾಗುತ್ತಿದೆ.

ಏಳು ದಿನ ಕ್ವಾರಂಟೈನ್

ಇನ್ನು, ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಬೆಳಗ್ಗೆ 6.15ರಿಂದ ತಪಾಸಣೆ ನಡೆಸಲಾಗುತ್ತಿದೆ. ತಮಿಳುನಾಡಿನಿಂದ ಆಗಮಿಸಿದ 25 ಬಸ್ಸುಗಳನ್ನು ತಡೆದು ತಪಾಸಣೆ ಮಾಡಲಾಗಿದೆ. ಎಲ್ಲರಿಗೂ ಏಳು ದಿನ ಹೋಂ ಕ್ವಾರಂಟೈನ್’ಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಕೆಎಸ್ಆರ್’ಟಿಸಿ ಬಸ್ಸುಗಳಿಗೆ ಸ್ಯಾನಿಟೈಸ್

ಓಂ ಶಕ್ತಿ ತೀರ್ಥಯಾತ್ರೆಗೆ ತೆರಳಿರುವ ನೂರಕ್ಕೂ ಹೆಚ್ಚು ಬಸ್ಸುಗಳು ಡಿಪೋಗೆ ಮರಳುತ್ತಿದ್ದಂತೆ, ರೆಗುಲರ್ ರೂಟ್’ಗಳಿಗೆ ಕಳುಹಿಸಲಾಗುತ್ತದೆ. ಆದರೆ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬಸ್ಸುಗಳಿಗೆ ಸ್ಯಾನಿಟೈಸ್ ಮಾಡಲು ಕೆಎಸ್ಆರ್’ಟಿಸಿ ನಿರ್ಧರಿಸಿದೆ. ಡಿಪೋಗೆ ಬರುತ್ತಿದ್ದಂತೆ ಬಸ್ಸುಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ, ನಂತರ ರೆಗುಲರ್ ರೂಟ್’ಗೆ ಬಸ್ಸುಗಳನ್ನು ಕಳುಹಿಸಲು ಯೋಜಿಸಲಾಗಿದೆ.

ಪ್ರಭಾವಿ ಮುಖಂಡರಿಂದ ವ್ಯವಸ್ಥೆ

ಪ್ರತಿ ವರ್ಷ ಸಾವಿರಾರು ಮಹಿಳೆಯರು ಓಂ ಶಕ್ತಿ ತೀರ್ಥಯಾತ್ರೆ ಕೈಗೊಳ್ಳುತ್ತಾರೆ. ಮಾಲಾಧಾರಣೆ ಮಾಡಿ, ಮಡಿಯಿಂದ ಇದ್ದು ದೇವಿಯ ದರ್ಶನಕ್ಕೆ ತೆರಳುತ್ತಾರೆ. ವರ್ಷದಿಂದ ವರ್ಷಕ್ಕೆ ಶಿವಮೊಗ್ಗದಲ್ಲಿ ಓಂ ಶಕ್ತಿಗೆ ತೆರಳುವ ಮಹಿಳೆಯರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಪ್ರಭಾವಿ ಮುಖಂಡರೊಬ್ಬರು ಓಂ ಶಕ್ತಿ ದರ್ಶನಕ್ಕೆ ಬಸ್ಸುಗಳ ಉಚಿತ ವ್ಯವಸ್ಥೆ ಮಾಡಿಕೊಡುತ್ತಾರೆ. ಈ ಭಾರಿಯೂ ಬಸ್ಸುಗಳ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

AVvXsEiSC8SNpq7PXFd22VIu Cyfw0m5S09KBDrVBucwL9lQjIVIOf5XmReYnKYpIs1cUPN5LG 4t42wldasHXSKoeNIh8CJ0eQ6DDf6pPXvNPz EDWOeJnTV0i32xV1GQmicsdiEPfKPljm1D HTbSebzRzMLYGtL0aScm9uribwE2MAUI ap 2Se1d evovg=s926
Photo : Suresh

ಮಹಿಳೆಯರು ತಮಿಳುನಾಡಿನ ಮೇಲ್ ಮರತ್ತೂರಿನಲ್ಲಿ ಓಂ ಶಕ್ತಿ ದೇವಿಯ ದರ್ಶನ ಪಡೆಯುತ್ತಾರೆ. ಬಳಿಕ ಕುಂಬಕೋಣಂ, ಶ್ರೀರಂಗಂ, ತಿರುವಣ್ಣಾಮಲೈ ಬಳಿಕ ರಾಜ್ಯದ ಕೆಲವು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ, ಶಿವಮೊಗ್ಗಕ್ಕೆ ಮರಳುತ್ತಿದ್ದಾರೆ. ವಿವಿಧ ಜಿಲ್ಲೆಯಿಂದ ಓಂ ಶಕ್ತಿ ತೀರ್ಥಯಾತ್ರೆಗೆ ತೆರಳಿದ್ದ ಮಹಿಳೆಯರಲ್ಲಿ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಶಿವಮೊಗ್ಗದ ಜನರಲ್ಲಿ ಭೀತಿ ಎದುರಾಗಿದೆ. ಓಂ ಶಕ್ತಿ ತೀರ್ಥಯಾತ್ರೆಯ ಬಳಿಕ ಹಿಂತಿರುಗುತ್ತಿರುವ ಮಹಿಳೆಯರ ಪರೀಕ್ಷೆ ಮಾಡಲಾಗುತ್ತಿದೆ.

ಇದನ್ನೂ ಓದಿ | ಸರ್ಕಾರದಿಂದ ಮತ್ತಷ್ಟು ಟಫ್ ರೂಲ್ಸ್, ಶಿವಮೊಗ್ಗ ಜಿಲ್ಲೆಗೆ ಯಾವುದೆಲ್ಲ ಅನ್ವಯವಾಗುತ್ತೆ?

AVvXsEgAymYE4jzBuoG1rLC5lv44E2Ft1szf
Photo : Suresh

AVvXsEiGgq1MHdLrmFhDGzRBwCtXWctThAwFT2MCa4kRbsxvwwk7sWvZlxcqh cSdTZ5Cb5E5oy8BO9N84sD7TJWzNEH3qRNIIH6CTOLX8kl5JkZbWu ddRBqq71dANi TwDsWr9EJAqHhpVBWzqPjZIjU4hKDpHTt0n g04hMsoOB9UqwlTB5Y bZVHhZWBig=s926

AVvXsEghbaZwx3 D8ElpNRnvLEieZ3waHyRZSLK5QoPVTwXtb32gJYsAa0AvBhjNEZbkrm9qQUeLCPugKZWQGjr7nN4laODCy0VeGai 6 crKJZ3ZcYbvbLuh79OVbid6nUR p
Photo : Suresh

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 5, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment