ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MARCH 2021
ಕರೋನ ಎರಡನೇ ಅಲೆ ಭೀತಿಯ ಹಿನ್ನೆಲೆ, ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಬಿಗಿ ಕ್ರಮ ಕೈಗೊಂಡಿದೆ. ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೆ ಸೇರಿದಂತೆ ಇತರೆ ಹಬ್ಬಗಳಲ್ಲಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.
ಸಮಾರಂಭಗಳು, ಆಚರಣೆಗಳು ಮತ್ತು ಸಾರ್ವಜನಿಕರು ಗುಂಪು ಸೇರಬಹುದಾದ ಇತರೆ ಚಟುವಟಿಕೆಗೆ ಅವಕಾಶವಿಲ್ಲ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಎಚ್ಚರಿಕೆ ನೀಡಿದ್ದಾರೆ.
ಆದೇಶ ಉಲ್ಲಂಘಿಸುವ ವ್ಯಕ್ತಿ ಅಥವಾ ಸಂಘ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಾಹಣ ಕಾಯ್ದೆ-2005, ಐ.ಪಿ.ಸಿ.ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020ರ ಭಾಗ (4) (5)&(10) ಅನುಗುಣವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200