ಗೋ ಪೂಜೆಯಾದ ಕೆಲವೇ ಹೊತ್ತಿನಲ್ಲಿ ಸಾಲು ಸಾಲು ಹಸುಗಳು ಸಾವು, ಶಿವಮೊಗ್ಗ ಪಾಲಿಕೆ ವಿರುದ್ಧ ಜನಾಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ನವೆಂಬರ್ 2021

ಬಲಿಪಾಡ್ಯಮಿ ಗೋ ಪೂಜೆ ಸಂದರ್ಭ ಪೂಜೆ ಮಾಡಿಸಿಕೊಂಡ ಗೋವುಗಳು ಕೆಲವೇ ಹೊತ್ತಿನಲ್ಲಿ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. ಘನ ತ್ಯಾಜ್ಯ ವಿಲೇವಾರಿಯಲ್ಲಿನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಜನರು ಆರೋಪಿಸಿದ್ದಾರೆ.

ಶಿವಮೊಗ್ಗದ ಅನುಪಿನಕಟ್ಟೆ ಗ್ರಾಮದಲ್ಲಿ ಇವತ್ತು ಐದಕ್ಕೂ ಹೆಚ್ಚು ಗೋವುಗಳು ಸಾವನ್ನಪ್ಪಿವೆ. ಇನ್ನಷ್ಟು ಗೋವುಗಳು ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿವೆ. ಪಶುವೈದ್ಯರು ಮತ್ತು ಸಿಬ್ಬಂದಿ ಮನೆಗೆ ಮೆನೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಗೋವುಗಳ ಮೂಖರೋಧನೆ ಕಂಡು ಅವುಗಳನ್ನು ಸಾಕಿದ್ದವರು ಆಕ್ರೋಶ ಇಮ್ಮಡಿಯಾಗಿದೆ.

ಏನಿದು ಘಟನೆ? ಯಾಕಾಯ್ತು ಹೀಗೆ?

ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕವಿದೆ. ಶಿವಮೊಗ್ಗ ನಗರದಲ್ಲಿ ಉತ್ಪತ್ತಿಯಾಗುವ ತ್ಯಜ್ಯದ ವಿಲೇವಾರಿ ಪ್ರಕ್ರಿಯೆ ಇಲ್ಲಿಯೇ ನಡೆಯಲಿದೆ. ತ್ಯಾಜ್ಯ ತುಂಬಿಕೊಂಡು ಬರುವ ವಾಹನಗಳು ಘಟಕದಲ್ಲಿ ತ್ಯಾಜ್ಯ ಸುರಿಯುವ ಬದಲು, ತುಂಗಾ ಎಡದಂಡೆ ಕಾಲುವೆ ಮೇಲೆ ಸುರಿದು ಹೋಗುತ್ತಿರುವ ಆರೋಪವಿದೆ. ಹೀಗೆ ಸುರಿದ ಕಸದ ರಾಶಿ ಮಧ್ಯೆ ಇದ್ದ ಆಹಾರ ಪದಾರ್ಥ ಸೇವಿಸಿ ಹಸುಗಳು ಸಾವನ್ನಪ್ಪಿವೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಮೇಯಲು ಹೋದ ಹಸುಗಳು ಮೇಲೇಳುತ್ತಿಲ್ಲ

ಅನುಪಿನಕಟ್ಟೆ ಗ್ರಾಮಸ್ಥರು ನಿತ್ಯ ಹಸುಗಳನ್ನು ಮೇಯಲು ಬಿಡುತ್ತಾರೆ. ಚಾನಲ್ ಸುತ್ತಮುತ್ತಲ ಪ್ರದೇಶದಲ್ಲಿ ಮೇಯಲು ಹೋಗಿ, ಹಿಂತಿರುಗಿದ್ದ ಹಸುಗಳು ಕೊಟ್ಟಿಗೆಯಲ್ಲಿ ಮಲಗಿದ್ದವು ಈಗ  ಮೇಲೇಳದ ಸ್ಥಿತಿಗೆ ತಲುಪಿವೆ. ಸುಮಾರು ಐದು ಗೋವುಗಳು ಕೊಟ್ಟಿಗೆಯಲ್ಲೇ ಪ್ರಾಣ ಕಳೆದುಕೊಂಡಿವೆ. ಇನ್ನಷ್ಟು ಗೋವುಗಳು ಕುಳಿತಲ್ಲೆ ನರಳಾಡುತ್ತಿವೆ. ಕೆಲವು ದನಗಳು ಬಾಯಲ್ಲಿ ಹುಲ್ಲನ್ನು ಗಟ್ಟಿಯಾಗಿ ಕಚ್ಚಿಕೊಂಡು ನುಂಗಲಾಗದೆ, ಉಗುಳಲಾರದೆ ಒದ್ದಾಡುತ್ತಿವೆ. ಕೆಲವು ದನಗಳ ಪಕ್ಕದಲ್ಲಿ ಕೆಲವು ದಿನದ ಹಿಂದಷ್ಟೆ ಜನ್ಮತಾಳಿದ ಕರುಗಳು ಏನೂ ಅರಿವಾಗದೆ ಗೊಂದಲದಲ್ಲಿ ನಿಂತಿವೆ.

ಹಳಸಿದ ಅನ್ನ, ಆಹಾರ ಪದಾರ್ಥಗಳು

ಕಸ ಸಂಗ್ರಹ ಮಾಡಿದ ವಾಹನಗಳು ಬೆಳಗ್ಗೆ ಮತ್ತು ರಾತ್ರಿ ವೇಳೆ ವಿಲೇವಾರಿ ಘಟಕಕ್ಕೆ ಬರುತ್ತವೆ. ‘ಪಾಲಿಕೆ ವಾಹನಗಳು ತ್ಯಾಜ್ಯ ವಿಲೇವಾರಿ ಮಾಡಲು ಬರುತ್ತವೆ. ಕೆಲವರು ಕಲ್ಯಾಣ ಮಂಟಪ, ಕಾರ್ಯಕ್ರಮದಲ್ಲಿ ಉಳಿದ ಆಹಾರವನ್ನು ತಂದು ಚಾನಲ್ ಪಕ್ಕದಲ್ಲಿ ಸುರಿದು ಹೋಗುತ್ತಾರೆ. ನಾವು ಎಷ್ಟೆ ನಿಗಾ ವಹಿಸಿದರು ತಡೆಯಲು ಆಗುತ್ತಿಲ್ಲ. ದನಗಳನ್ನು ಮೇಯಲು ಬಿಟ್ಟಾಗ, ಅವು ಈ ಆಹಾರವನ್ನು ಸೇವಿಸುತ್ತವೆ’ ಎಂದು ಆರೋಪಿಸುತ್ತಾರೆ ಸ್ಥಳೀಯರಾದ ಸುರೇಶ್.

AVvXsEiusz14QiTr21mX1iU PggNqRax6VNK1yohZk11eIIoL143WswA UQqKVJf3 5FjeXLHUeYJlrzHu6om8IspWgHLiBIuFcSMG8OhOA2vCNr7qQkk0MRwtcK

ಗೋವುಗಳ ಜೊತೆ ಜೀವನವು ಹೋಯ್ತು

ಅನುಪಿನಕಟ್ಟೆಯಲ್ಲಿ ಬಹುತೇಕರು ಬ್ಯಾಂಕು, ಸ್ವ ಸಹಾಯ ಸಂಘಗಳಲ್ಲಿ ಸಾಲ ಮಾಡಿ ಗೋವುಗಳನ್ನು ಖರೀದಿಸಿದ್ದರು. ಹಾಲು ಕರೆದು ಜೀವನ ನಡೆಸುತ್ತಿದ್ದರು. ಈಗ ಪ್ರೀತಿಯ ಗೋವುಗಳನ್ನು ಕಳೆದುಕೊಂಡು ಜನರು ಕಣ್ಣೀರು ಹಾಕುತ್ತಿದ್ದಾರೆ. ‘ಸಂಘದಿಂದ 50 ಸಾವಿರ ಸಾಲ ತಗೆದುಕೊಂಡು ಹಸು ಖರೀದಿ ಮಾಡಿದ್ದೆವು. ಆದರೆ ಈಗ ಹೀಗಾಗಿದೆ. ನಾವು ನಿನ್ನೆ ಹಬ್ಬ ಮಾಡಿಲ್ಲ. ಹಸುವಿನ ಆರೈಕೆ ಮಾಡಿಕೊಂಡಿದ್ದೇವೆ. ಹಸುವಿನಿಂದಲೇ ನಮ್ಮ ಜೀವನ ನಡೆಯುತ್ತಿತ್ತು. ಈಗ ಅದಿಲ್ಲ’ ಎಂದು ಗದ್ಗದಿತರಾಗುತ್ತಾರೆ ದಾನಮ್ಮ.

AVvXsEiWXIzAyDrLNty287qBKAy80Fshm3cj3jRaz65TCBA7Dj1axOiloV5E7rB5ctf0CgEE8yCJ9K DvcgVxIC9F4X6eg16wEY5FRke SoDrQy1tKq3JO WjslUyVDBjFHiYbCbT1Bz65cVlYp suM JBxpfqYYBj2oX0imnv7

ಸ್ಥಳಕ್ಕೆ ಉಪ ಮೇಯರ್, ಪೊಲೀಸ್ ಭೇಟಿ

ಸಾಲು ಸಾಲು ಗೋವುಗಳು ಸಾವನ್ನಪ್ಪುತ್ತಿದ್ದಂತೆ ಅನುಪಿನಕಟ್ಟೆ ಗ್ರಾಮಸ್ಥರು ಆಕ್ರೋಶಗೊಂಡರು. ಬೀದಿಗಿಳಿದು ಪ್ರತಿಭಟನೆ ಆರಂಭಿಸಿದರು. ಕಸ ಸಾಗಣೆ ಮಾಡುತ್ತಿದ್ದ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ವಿಚಾರ ತಿಳಿಯುತ್ತಿದ್ದಂತೆ ತುಂಗಾ ನಗರ ಠಾಣೆ ಇನ್ಸ್’ಪೆಕ್ಟರ್ ದೀಪಕ್ ಸ್ಥಳಕ್ಕೆ ಭೇಟಿ ನೀರಿ ಪರಿಶೀಲಿಸಿದರು.

AVvXsEjkC dByMudXs7VE37B8mUlqT P71vPu7FJ18X7g3ixSO3jXJuMy6pK6q0oBhwopsw

ಇನ್ನು, ಉಪ ಮೇಯರ್ ಶಂಕರ್ ಗನ್ನಿ ಅವರು ಸ್ಥಳಕ್ಕೆ ಭೇಟಿ ನೀಡಿರ ಅಹವಾಲು ಆಲಿಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಉಪ ಮೇಯರ್ ಶಂಕರ್ ಗನ್ನಿ, ‘ಮಹಾನಗರ ಪಾಲಿಕೆಯಿಂದ ಜನರಿಗೆ ನ್ಯಾಯ ಕೊಡಿಸುತ್ತೇವೆ. ಸಂಬಂಧಿಸಿದ ಅಧಿಕಾರಿಗಳು ಕೂಡ ಇಲ್ಲಿಗೆ ಬಂದಿದ್ದಾರೆ. ಯಾರಿಗೆಲ್ಲ ಸಮಸ್ಯೆಯಾಗಿದೆ ಅನ್ನುವ ಕುರಿತು ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಪಾಲಿಕೆಯಿಂದ ಜವಾಬ್ದಾರಿಯಿಂದ ನಿಭಾಯಿಸುತ್ತೇವೆ’ ಎಂದು ತಿಳಿಸಿದರು.

ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡದ ಬಗ್ಗೆ ಈ ಹಿಂದೆ ಹಲವು ಭಾರಿ ಪ್ರತಿಭಟನೆಗಳು ನಡೆದಿವೆ. ಈಗ ಹಸುಗಳು ಸಾವನ್ನಪ್ಪಿರುವುದು ಅನುಪಿನಕಟ್ಟೆ ಗ್ರಾಮದ ಹಲವು ನಿವಾಸಿಗಳಿಗೆ ಸಂಕಷ್ಟ ತಂದೊಡ್ಡಿದೆ. ಇನ್ನಾದರೂ ಮಹಾನಗರ ಪಾಲಿಕೆ ಈ ಕುರಿತು ಸೂಕ್ತ ಗಮನ ಹರಿಸಬೇಕಿದೆ.

AVvXsEjtec02MqxGjmwgaLHiBy8T841XxbXqwCvav26 TngH05Qb u1Enw5sg3hLaquvpPJwfarot2rT JKjPvzQGSs JMScSdEKvJ3 Jw4eWzOML0nI 8hNCTFoO5qyuHY6yxwZaTlqjnpVxX34oYp13l6k8nSxHRg5wrxH9IW9lJZ9UvbWnjIYhsv O8OYQ=s926

1635994521955990 3

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 6, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment