ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022
ನಿಷೇಧಾಜ್ಞೆ ಸಡಿಲಗೊಳಿಸಿದ್ದರಿಂದ ಶಿವಮೊಗ್ಗ ನಗರ ಇವತ್ತು ಸಹಜ ಸ್ಥಿತಿಗೆ ಮರಳಿದೆ. ಅಗತ್ಯ ವಸ್ತುಗಳ ಖರೀದಿಗೆ ಜನರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದ ವಿವಿಧೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಶಿವಮೊಗ್ಗ ನಗರದಲ್ಲಿ ಇವತ್ತು ಬೆಳಗ್ಗೆಯಿಂದ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೆ ವ್ಯಾಪಾರ, ವಹಿವಾಟು ಆರಂಭವಾಗಿದೆ. ತರಕಾರಿ, ಹಣ್ಣು, ಹೂವು, ದಿನಸಿ ವ್ಯಾಪಾರ ನಡೆಯುತ್ತಿದೆ.
ಗಾಂಧಿ ಬಜಾರ್’ಗೆ ಜೀವ ಕಳೆ
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಳಿಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂದಿನಿಂದ ಗಾಂಧಿ ಬಜಾರ್ ಸಂಪೂರ್ಣ ಬಂದ್ ಆಗಿತ್ತು. ಇವತ್ತು ಗಾಂಧಿ ಬಜಾರ್’ಗೆ ಜೀವ ಕಳೆ ಬಂದಿದೆ. ಅಗತ್ಯ ವಸ್ತುಗಳ ಖರೀದಿಗೆ ಜನರು ಗಾಂಧಿ ಬಜಾರ್ ಕಡೆಗೆ ಬರುತ್ತಿದ್ದಾರೆ. ಇಲ್ಲಿನ ದಿನಸಿ ಅಂಗಡಿಗಳು, ತರಕಾರಿ ಮಾರುಕಟ್ಟೆ ಬಳಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದಾರೆ. ಅಹಿತಕರ ಘಟನೆಗಳನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇದನ್ನು ಓದಿ | ಗಾಂಧಿ ಬಜಾರ್ ವಹಿವಾಟು ಸ್ಥಗಿತ, ಇದರ ಪರಿಣಾಮವೇನು? ಇಲ್ಲಿದೆ ಟಾಪ್ 5 ಪಾಯಿಂಟ್
ನೆಹರೂ ರೋಡ್, ದುರ್ಗಿಗುಡಿ
ನೆಹರೂ ರಸ್ತೆ, ಬಿ.ಹೆಚ್.ರಸ್ತೆ, ದುರ್ಗಿಗುಡಿ ಸೇರಿದಂತೆ ನಗರದ ಬಹುಭಾಗದ ಅಂಗಡಿಗಳಲ್ಲಿ ವ್ಯಾಪಾರ ಗರಿಗೆದರಿದೆ. ಗ್ರಾಹಕರು ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ದಿನಸಿ ಖರೀದಿ ಮಾಡುತ್ತಿದ್ದಾರೆ. ಶಿವಮೊಗ್ಗದ ಸಿಟಿ ಸೆಂಟರ್ ಮಾಲ್’ಗೂ ದೊಡ್ಡ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿದ್ದಾರೆ.
ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ
ನಿಷೇಧಾಜ್ಞೆ ಸಡಿಲಗೊಳಿಸಿದ್ದರಿಂದ ಎಲ್ಲಾ ವರ್ಗದ ವ್ಯಾಪಾರಿಗಳು ಅಂಗಡಿ ಬಾಗಿಲು ತೆಗೆದಿದ್ದಾರೆ. ಕೆಲವು ಕಡೆ ಪೊಲೀಸರು ದಿನಸಿ, ತರಕಾರಿ, ಹಣ್ಣು ಸೇರಿದಂತೆ ಅಗತ್ಯ ವಸ್ತುಗಳ ಹೊರತು ಉಳಿದ ಅಂಗಡಿಗಳ ಬಾಗಿಲು ಬಂದ್ ಮಾಡಿಸಿದರು. ಆದರೆ ವ್ಯಾಪಾರವಿಲ್ಲದೆ ಕೈ ಸುಟ್ಟುಕೊಂಡಿರುವ ವ್ಯಾಪಾರಿಗಳು ಪೊಲೀಸರು ಬರುವವರೆಗೆ ಅಂಗಡಿ ಬಾಗಿಲು ತೆಗೆಯುತ್ತಿದ್ದಾರೆ. ಪೊಲೀಸರು ತೆರಳುವವರೆಗೆ ಬಾಗಿಲು ಬಂದ್ ಮಾಡಿಸುತ್ತಿದ್ದಾರೆ.
‘ಮದುವೆ, ಜಾತ್ರೆಗಳಿಗೆ ಖರೀದಿ ಮಾಡಲು ಜನರು ಬರುತ್ತಿದ್ದಾರೆ. ವ್ಯಾಪಾರವಿಲ್ಲದೆ ಈಗಾಗಲೆ ಬಹಳ ನಷ್ಟ ಅನುಭವಿಸಿದ್ದೇವೆ. ಈಗ ಅಂಗಡಿ ತೆಗೆಯಲು ಅವಕಾಶ ಕೊಡುತ್ತಿಲ್ಲ. ಪೊಲೀಸರು ಬಂದಾಗ ಅಂಗಡಿ ಮುಚ್ಚುತ್ತೇವೆ. ಆ ಬಳಿಕ ಸ್ವಲ್ಪ ವ್ಯಾಪಾರ ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೆಸರು ಹೇಳಲು ಬಯಸದ ಜವಳಿ ವ್ಯಾಪಾರಿ ತಿಳಿಸಿದರು.
ಶನಿವಾರ ಮತ್ತು ಭಾನುವಾರ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ರಿಂದ ಸಂಜೆ 4 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ.
ಇದನ್ನು ಓದಿ | ಶಿವಮೊಗ್ಗ ನಗರದಲ್ಲಿ ಇನ್ನೆರಡು ದಿನ ನಿಷೇಧಾಜ್ಞೆ ವಿಸ್ತರಣೆ, ವ್ಯಾಪಾರಿಗಳಿಗೆ ಸ್ವಲ್ಪ ರಿಲ್ಯಾಕ್ಸ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






