SHIVAMOGGA LIVE NEWS | 16 APRIL 2023
SHIMOGA : ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (Candidate) ಕುರಿತು ಕುತೂಹಲ ಮುಂದುವರೆದಿದೆ. ಈ ನಡುವೆ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಎಸ್.ಎನ್.ಚನ್ನಬಸಪ್ಪ ಅವರ ಹೆಸರು ಮುನ್ನಲೆಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭ ಕೋರುವ ಸಂದೇಶಗಳು ಕಾಣಿಸಿಕೊಂಡಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಗಾಗಿ ಬಿಜೆಪಿಗೆ ಹೊಸ ಅಭ್ಯರ್ಥಿಯನ್ನು (Candidate) ಹುಡುಕುವ ಅನಿವಾರ್ಯತೆ ಇದೆ. ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್, ಎಸ್.ಎಸ್.ಜ್ಯೋತಿ ಪ್ರಕಾಶ್, ಡಾ.ಧನಂಜಯ ಸರ್ಜಿ, ಆಯನೂರು ಮಂಜುನಾಥ್ ಸೇರಿದಂತೆ ಹಲವರ ಹೆಸರು ಚರ್ಚೆಯಾಗುತ್ತಿತು. ಇಂದು ಮಧ್ಯಾಹ್ನದಿಂದ ಎಸ್.ಎಸ್.ಚನ್ನಬಸಪ್ಪ ಅವರ ಹೆಸರು ಮುನ್ನಲೆಗೆ ಬಂದಿದೆ.
ಇದನ್ನೂ ಓದಿ – ಶಿವಮೊಗ್ಗ ಕಾಂಗ್ರೆಸ್ ಕಚೇರಿ ಮುಂದೆ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ, ಭಾವುಕರಾದ ಜಿಲ್ಲಾಧ್ಯಕ್ಷ
ಈಶ್ವರಪ್ಪ ಅವರ ಬೆಂಬಲಿಗ ಎಸ್.ಎಸ್.ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಲಿದೆ ಎಂದು ಬಿಜೆಪಿ ಪಾಳಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿಯು ಚನ್ನಬಸಪ್ಪ ಅವರಿಗೆ ಶುಭ ಕೋರುವ ಸಂದೇಶಗಳನ್ನು ಪ್ರಕಟಿಸಲಾಗುತ್ತಿದೆ. ಈ ನಡುವೆ ಚನ್ನಬಸಪ್ಪ ಅವರ ಪೋಸ್ಟರ್ಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಂಗಳವಾರ ನಾಮಪತ್ರ ಸಲ್ಲಿಸುತ್ತಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಇನ್ನಷ್ಟೆ ಪ್ರಕಟವಾಗಬೇಕಿದೆ. ಆ ಬಳಿಕ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಕುರಿತ ಕುತೂಹಲಕ್ಕೆ ತೆರೆ ಬೀಳಲಿದೆ.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





