ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 25 JULY 2023
SHIMOGA : ಸ್ಮಾರ್ಟ್ ಸಿಟಿ ಯೋಜನೆಯ ವಿದ್ಯುತ್ ಕಾಮಗಾರಿಗಳ ಕುರಿತು ಜನರು ಆಕ್ಷೇಪ ಮತ್ತು ಆತಂಕ ವ್ಯಕ್ತಪಡಿಸುತ್ತಿರುವುದು ಹೊಸತೇನಲ್ಲ. ಈಗ ನಗರದ ಹಿರಿಯ ಅಧಿಕಾರಿಗೆ ಸ್ಮಾರ್ಟ್ ಸಿಟಿ ಯೋಜನೆಯ ಅವೈಜ್ಞಾನಿಕ ವಿದ್ಯುತ್ ಕಾಮಗಾರಿಯಿಂದ ಕರೆಂಟ್ ಶಾಕ್ (Shock) ತಗುಲಿದೆ. ಇದನ್ನು ಖುದ್ದು ಅಧಿಕಾರಿಯೆ ಬಹಿರಂಗಪಡಿಸಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್, ಈಚೆಗಷ್ಟೆ ಸ್ಮಾರ್ಟ್ ಸಿಟಿ ಎಂ.ಡಿ. ಜವಾಬ್ದಾರಿಯನ್ನು ವಹಿಸಿಕೊಂಡಿರುವ ಮಾಯಣ್ಣ ಗೌಡ ಅವರಿಗೆ ಕರೆಂಟ್ ಶಾಕ್ ಹೊಡೆದಿದೆ. ಇದನ್ನು ಸ್ವತಃ ಮಾಯಣ್ಣಗೌಡ ಅವರೆ ಬಹಿರಂಗಪಡಿಸಿದ್ದಾರೆ.
ಏನಿದು ಕರೆಂಟ್ ಶಾಕ್ ಕೇಸ್?
ಶಿವಮೊಗ್ಗ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಭೂಗತ ವಿದ್ಯುತ್ ಕೇಬಲ್ ಅವೈಜ್ಞಾನಿಕ ಕಾಮಗಾರಿ, ಲೋಪಗಳ ಕುರಿತು ಪಕ್ಷಾತೀತವಾಗಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸಭೆಯಲ್ಲಿ ಮಾತನಾಡಿದ ಕಮಿಷನರ್ ಮಾಯಣ್ಣಗೌಡ, ತಮಗೆ ಕರೆಂಟ್ ಹೊಡೆದ ವಿಚಾರವನ್ನು ಪ್ರಸ್ತಾಪಿಸಿದರು.
.jpeg)
ತುಂಗಾ ನದಿ ತೀರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಹಾಗಾಗಿ ಮಂಟಪ ಮುಳುಗಿರುವುದನ್ನು ಜನರು ವೀಕ್ಷಿಸಲು ಮಂಟಪದ ಸಮೀಪ ತೆರಳಲು ಅವಕಾಶವಿಲ್ಲ. ಅಲ್ಲಿ ಗೇಟ್ಗಳನ್ನು ಬಂದ್ ಮಾಡಲಾಗಿದೆ. ಜನರು ಮಂಟಪ ನೋಡಲು ಅವಕಾಶ ಕೊಡಿ ಎಂದು ಜನಪ್ರತಿನಿಧಿಗಳು ಒತ್ತಾಯಿಸಿದ್ದರು. ಈ ಹಿನ್ನೆಲೆ ಪರಿಶೀಲನೆಗೆ ಸ್ಥಳಕ್ಕೆ ತೆರಳಿದ್ದಾಗ ಕರೆಂಟ್ ಶಾಕ್ (Shock) ಹೊಡೆದಿದೆ ಎಂದು ಮಾಯಣ್ಣ ಗೌಡ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ವಿಚಾರ, ಶಿಕ್ಷಣ ಇಲಾಖೆಯಿಂದ ಪ್ರಮುಖ ಸೂಚನೆ, ಯಾವ್ಯಾವ ಶಾಲೆಗೆ ರಜೆ ಸಿಗುತ್ತೆ?
‘ಸ್ಥಳಕ್ಕೆ ಭೇಟಿ ನೀಡಿದಾಗ ವಿದ್ಯುತ್ ವಯರ್ ಒಂದನ್ನು ನೆಲಕ್ಕೆ ಹಾಗೆ ಬಿಡಲಾಗಿತ್ತು. ಅದರ ಮೇಲೆ ಕಲಿಟ್ಟಾಗ ನನಗೆ ಕರೆಂಟ್ ಶಾಕ್ ಹೊಡೆಯಿತು. ಕೂಡಲೆ ಫೋಟೊಗಳನ್ನು ತೆಗೆದು ಸ್ಮಾರ್ಟ್ ಸಿಟಿಯ ವಾಟ್ಸಪ್ ಗ್ರೂಪ್ನಲ್ಲಿ ಕಳುಹಿಸಿದೆ. ಇದನ್ನು ತಕ್ಷಣ ಸರಿಪಡಿಸುವಂತೆ ಸೂಚಿಸಿದೆʼ ಎಂದು ತಿಳಿಸಿದರು.
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು





