ಶಿವಮೊಗ್ಗ ಸಿಟಿಯಲ್ಲಿ ಸೈಕಲ್ ಜಾಥಾ, ಮೋದಿ, ಯಡಿಯೂರಪ್ಪ ವಿರುದ್ಧ ಆಕ್ರೋಶ, ಹೇಗಿತ್ತು ಪ್ರತಿಭಟನೆ ಕಾವು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021
➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಸೈಕಲ್ ಜಾಥಾ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೈಕಲ್ ಏರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ | ಪೆಟ್ರೋಲ್, ಡಿಸೇಲ್ ದರ ಮತ್ತೆ ಹೆಚ್ಚಳ, ಶಿವಮೊಗ್ಗ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ನಾಲ್ಕನೆ ಬಾರಿಗೆ ಏರಿಕೆ

ಎಲ್ಲೆಲ್ಲಿ ಹೇಗಿತ್ತು ಪ್ರತಿಭಟನೆ?

ಜಿಲ್ಲಾಧ್ಯಕ್ಷ ಹೆಚ್‍.ಎಸ್.ಸುಂದರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಆವರಣದಿಂದ ಸೈಕಲ್ ಜಾಥಾ ನಡೆಸಲಾಯಿತು. ಬಾಲರಾಜ ಅರಸ್ ರಸ್ತೆ, ಗೋಪಿ ಸರ್ಕಲ್, ನೆಹರೂ ರೋಡ್, ಎಎ  ಸರ್ಕಲ್, ಬಿ.ಹೆಚ್‍.ರಸ್ತೆ, ಗಾಂಧಿ ಬಜಾರ್ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್‍ತನಕ ಸೈಕಲ್ ಜಾಥಾ ನಡೆಯಿತು.

ಮತ್ತೊಂದೆಡೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ಬಸ್ ನಿಲ್ದಾಣದಿಂದ ಸೈಕಲ್ ಜಾಥಾ ನಡೆಸಲಾಯಿತು. ಬಿ.ಹೆಚ್.ರಸ್ತೆ, ಎಎ ಸರ್ಕಲ್, ‍ನೆಹರೂ ರೋಡ್‍, ಗೋಪಿ ಸರ್ಕಲ್, ದುರ್ಗಿಗುಡಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸೈಕಲ್‍ ಏರಿ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಸೈಕಲ್ ಜಾಥಾದ ವಿಡಿಯೋ ರಿಪೋರ್ಟ್ ಇಲ್ಲಿದೆ

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment