SHIVAMOGGA LIVE NEWS | 3 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನಟ ಪುನೀತ್ ರಾಜಕುಮಾರ್ ಅವರ ಸಮಾಧಿ ದರ್ಶನಕ್ಕೆ ಇಬ್ಬರು ಅಭಿಮಾನಿಗಳು ಶಿವಮೊಗ್ಗದಿಂದ ಸೈಕಲ್ ಜಾಥಾ ಆರಂಭಿಸಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಜಾಥಾ ನಡೆಯಲಿದೆ.
ಮೆಸ್ಕಾಂ ಎಂಜಿನಿಯರ್ ನಂಜುಂಡಿ ಮತ್ತು ಸ್ವರೂಪ್ ಎಂಬುವವರು ಸೈಕಲ್ ಜಾಥಾ ನಡೆಸುತ್ತಿದ್ದಾರೆ. ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಜಾಥಾ ಆರಂಭಿಸಲಾಯಿತು.
ಅಪ್ಪು ಫೋಟೊ ಹೊತ್ತು ಯಾತ್ರೆ
ನಂಜುಂಡಿ ಮತ್ತು ಸ್ವರೂಪ್ ಅವರು ನಟ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು. ಅಪ್ಪು ಅವರ ಸಮಾಧಿ ದರ್ಶನ ಮಾಡಬೇಕು ಎಂದುಕೊಂಡಿದ್ದರು. ಅದರಂತೆ ಇವತ್ತು ಇಬ್ಬರೂ ಸೈಕಲ್ ಹತ್ತಿದ್ದಾರೆ.
ಸೈಕಲ್ ಮುಂಭಾಗ ನಟ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಇರಿಸಿಕೊಂಡಿದ್ದಾರೆ. ಇವತ್ತು ಸೈಕಲ್ ಜಾಥಾ ಆರಂಭವಾಗಿದೆ. ನಾಳೆ ಹೊತ್ತಿಗೆ ಇಬ್ಬರು ಬೆಂಗಳೂರು ತಲುಪಲಿದ್ದಾರೆ. ಬಳಿಕ ಅಪ್ಪು ಸಮಾಧಿ ದರ್ಶನ ಪಡೆಯಲಿದ್ದಾರೆ.
ಸೈಕಲ್ ಜಾಥಾ ಆರಂಭಿಸಿದ ನಂಜುಂಡಿ ಮತ್ತು ಸ್ವರೂಪ್ ಅವರಿಗೆ ಸ್ನೇಹಿತರು, ಹಿತೈಷಿಗಳು ಇವತ್ತು ಶುಭ ಹಾರೈಸಿದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






