SHIVAMOGGA LIVE NEWS | RAINFALL | 16 ಮೇ 2022
ಶಿವಮೊಗ್ಗ ನಗರದಲ್ಲಿ ಗಾಳಿ, ಗುಡುಗು ಸಹಿತ ಜೋರು ಮಳೆ ಆರಂಭವಾಗಿದೆ. ದಿಢೀರ್ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಚಂಡಮಾರುತದ ಪರಿಣಾಮ ಕಳೆದ ವಾರ ರಾಜ್ಯದ ವಿವಿಧೆಡೆ ಮಳೆಯಾಗಿತ್ತು. ಶಿವಮೊಗ್ಗ ಜಿಲ್ಲೆಯಾದ್ಯಂತ ಕೂಡ ಮಳೆ ಅಬ್ಬರಿಸಿತ್ತು. ಒಂದೆರಡು ದಿನ ಬಿಡುವಿನ ಬಳಿಕ ಪುನಃ ಮಳೆ ಶುರುವಾಗಿದೆ.
ಶಿವಮೊಗ್ಗ ನಗರದಲ್ಲಿ ಇವತ್ತು ಸಂಜೆಯಿಂದ ಜೋರು ಗಾಳಿ, ಗುಡುಗು ಸಹಿತ ಮಳೆ ಸುರಿಯುತ್ತಿದೆ. ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ನೆಮ್ಮದಿ ಮೂಡಿಸಿದೆ. ಈ ಮಧ್ಯೆ ದಿಢೀರ್ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸಂಜೆ ವೇಳೆ ವ್ಯಾಪಾರ, ವಾಹಿವಾಟಿಗೂ ತೊಂದರೆ ಉಂಟಾಗಿದೆ.
ಭದ್ರಾವತಿಯಲ್ಲೂ ವರುಣಾರ್ಭಟ
ಭದ್ರಾವತಿ ತಾಲೂಕಿನಲ್ಲಿಯು ಇವತ್ತು ಮಳೆ ಅಬ್ಬರಿಸಿದೆ. ಜೋರಿ ಮಳೆಯಿಂದಾಗಿ ಭದ್ರಾವತಿಯಲ್ಲಿಯು ಜನಜೀವನ ಅಸ್ತವ್ಯಸ್ತ ಉಂಟಾಯಿತು.
ಇನ್ನೂ ಐದು ದಿನ ಭಾರಿ ಮಳೆ
ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಇನ್ನೂ ಐದು ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಜೋರು ಮಳೆ ಸುರಿಯಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಪೂರ್ವ ಮತ್ತು ಪಶ್ಚಿಮ ಕರಾವಳಿಯಲ್ಲಿನ ಚಂಡಮಾರುತದ ಪರಿಣಾಮ ದಕ್ಷಿಣ ಭಾರತದಲ್ಲಿ ಮಳೆ ಸುರಿಯುತ್ತಿದೆ. ಇನ್ನು, ಈ ಭಾರಿ ನಿಗದಿಗಿಂತಲೂ ಮುಂಚೆಯೆ ಮುಂಗಾರು ಪ್ರವೇಶಿಸಲಿದೆ. ಹಾಗಾಗಿ ಈ ತಿಂಗಳ ಅಂತ್ಯದ ವೇಳೆ ಮುಂಗಾರು ಮಳೆ ಶುರುವಾಗುವ ಸಾದ್ಯತೆ ಇದೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200