ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಡಿ.ಮಂಜುನಾಥ್ ಅವರು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಡಿ.ಮಂಜುನಾಥ್ ಅವರು ಅತ್ಯಧಿಕ ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿಗಳಾಗಿದ್ದ ಶಂಕರಪ್ಪ ಅವರು ಎರಡನೇ ಸ್ಥಾನ, ಶಿ.ಜು.ಪಾಶ ಮತ್ತು ಗಾ.ರಾ.ಶ್ರೀನಿವಾಸ್ ಅವರು ನಂತರದ ಸ್ಥಾನ ಪಡೆದಿದ್ದಾರೆ. ಮತಗಳ ವಿವರ ಇನ್ನಷ್ಟೆ ಲಭ್ಯವಾಗಬೇಕಿದೆ.
ಪಟಾಕಿ, ಹಾರ, ಸಿಹಿ
ಡಿ.ಮಂಜುನಾಥ್ ಅವರಿಗೆ ಅಧಿಕ ಮತಗಳು ಲಭಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಅವರ ಅಭಿಮಾನಗಳು ಸಂಭ್ರಮಾಚರಣೆ ಮಾಡಿದರು. ಮತ ಎಣಿಕೆ ಕೇಂದ್ರದ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಡಿ.ಮಂಜುನಾಥ್ ಅವರಿಗೆ ಹಾರ ಹಾಕಿ, ಘೋಷಣೆಗಳನ್ನು ಕೂಗಿದರು.
ನಾಲ್ಕನೆ ಭಾರಿಗೆ ಅಧ್ಯಕ್ಷಗಿರಿ
ಡಿ.ಮಂಜುನಾಥ್ ಅವರು ಈ ಹಿಂದೆಯು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾಗಿದ್ದರು. ಅವರು ಜಿಲ್ಲಾಧ್ಯಕ್ಷರಾಗಿದ್ದ ಅವಧಿಯಲ್ಲಿ 73ನೇ ಕನ್ನಡ ಸಾಹಿತ್ಯ ಸಮ್ಮೇಳನ ಶಿವಮೊಗ್ಗದಲ್ಲಿ ನಡೆದಿತ್ತು. ನಾಲ್ಕನೆ ಭಾರಿಗೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






