SHIVAMOGGA LIVE NEWS | 20 OCTOBER 2023
SHIMOGA : ಮಲೆನಾಡು ಮಳೆಕಾಡು ವನ್ಯಜೀವಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಿಂದ ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದಲ್ಲಿರುವ (Elephant Camp) ಮಾವುತ ಹಾಗೂ ಕಾವಾಡಿಗಳಿಗೆ ದಸರಾ ಹಬ್ಬದ ಪ್ರಯುಕ್ತ ಬಟ್ಟೆ ವಿತರಿಸಲಾಯಿತು.
ಆನೆಗಳ ತರಬೇತಿ ಕ್ಯಾಂಪ್ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಎಂಆರ್ಆರ್ಎಸ್ ಸಂಸ್ಥೆಯ ಅಂಗಸಂಸ್ಥೆ ಸಕ್ರೆಬೈಲು ವೈಲ್ಡ್ ಟಸ್ಕರ್ ಗೌರವಾಧ್ಯಕ್ಷ ಎಂ .ಶ್ರೀಕಾಂತ್, ಆನೆ ಬಿಡಾರದ 80 ಮಾವುತರು, ಕಾವಾಡಿಗಳು ಮತ್ತು ಗಾಜನೂರು ವನ್ಯಜೀವಿ ವಿಭಾಗದ ಡಿಸಿಪಿ ವಾಚರ್ಸ್ ಮತ್ತು ನಿವೃತ್ತ ಜಮೇದಾರ್ ಗಳಿಗೆ ಬಟ್ಟೆ ವಿತರಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಜೇಸುದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಉಪಸ್ಥಿತರಿದ್ದರು. ಪತ್ರಕರ್ತ ನಾಗರಾಜ್ ನೇರಿಗೆ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವನ್ಯಜೀವಿ ವಿಭಾಗದ ವೈದ್ಯ ಡಾ.ವಿನಯ್, ಡಿಆರ್ಎಫ್ಒ ಮಲ್ಲಿಕಾರ್ಜುನ್ ಸೇರಿದಂತೆ ಬಿಡಾರದ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ- ದಸರಾ ರಜೆ, ಪ್ರಯಾಣಿಕರ ಅನುಕೂಲಕ್ಕಾಗಿ KSRTCಯಿಂದ ವಿಶೇಷ ವ್ಯವಸ್ಥೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200