Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ದಸರಾ ಅದ್ಧೂರಿ ಆರಂಭ, ನಗರದ ವಿವಿಧೆಡೆ ನಾಡದೇವಿ ಮೆರವಣಿಗೆ

ಶಿವಮೊಗ್ಗ ದಸರಾ ಅದ್ಧೂರಿ ಆರಂಭ, ನಗರದ ವಿವಿಧೆಡೆ ನಾಡದೇವಿ ಮೆರವಣಿಗೆ

15/10/2023 7:19 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 15 OCTOBER 2023

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ನಮ್ಮೊಳಗಿರುವ ಕೆಟ್ಟ ಆಲೋಚನೆಗಳು ತೊಡೆದು, ಕತ್ತಲೆಯನ್ನು ದೂರಗೊಳಿಸುವುದೆ ನವರಾತ್ರಿಯ (Dasara) ಉದ್ದೇಶ. ಇದೆ ಕಾರಣಕ್ಕೆ ನವರಾತ್ರಿ ಸಂದರ್ಭ ಸರಸ್ವತಿ, ದುರ್ಗಾ, ಕಾಳಿಯ ಪೂಜೆ ನೆರವೇರಿಸಲಾಗುತ್ತದೆ ಎಂದು ಭಾರತೀಯ ಶಾಸ್ತ್ರಿಯ ನೃತ್ಯ ಕಲಾವಿದೆ ವೈಜಯಂತಿ ಕಾಶಿ ಹೇಳಿದರು.

ನಗರದ ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಭಾನುವಾರ ನಾಡದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಶಿವಮೊಗ್ಗ ದಸರಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೆಟ್ಟ ಆಲೋಚನೆಗಳನ್ನು ದೂರಗೊಳಿಸಲು ಶಕ್ತಿಯ ಅಗತ್ಯವಿದೆ. ಇದೆ ಕಾರಣಕ್ಕೆ ದುರ್ಗೆಯನ್ನು ಪೂಜಿಸುತ್ತೇವೆ. ಆಕೆಯ ಕೈಯಲ್ಲಿರುವ ಆಯುಧಗಳು ನಮ್ಮ ಕೆಟ್ಟ ಆಲೋಚನೆಗಳನ್ನು ತೊಡೆದು ಹಾಕುವುದರ ಸಂಕೇತವಾಗಿದೆ. ಇನ್ನು ವಿದ್ಯೆ, ಬುದ್ಧಿಗಾಗಿ ಸರಸ್ವತಿಯನ್ನು ಪೂಜಿಸುತ್ತೇವೆ. ಪುಸ್ತಕಗಳನ್ನು ಓದುವುದಷ್ಟೆ ವಿದ್ಯೆಯಲ್ಲ. ಪ್ರತಿಯೊಂದರಲ್ಲಿಯು ಐ‍ಶ್ವರ್ಯ ಕಾಣಬೇಕು. ಪರಿಸರವೆ ನಮಗೆ ಐಶ್ವರ್ಯ. ಪರಿಸರ ಸಂರಕ್ಷಣೆಯಿಂದ ಮನುಷ್ಯನ ಬದುಕು ನೆಮ್ಮದಿಯಿಂದ ಇರಲು ಸಾಧ್ಯ ಎಂದರು.

ಇದನ್ನೂ ಓದಿ – ಸಿಗಂದೂರು ಚೌಡೇಶ್ವರಿ ಸೇರಿ ನವದೇವಿ ದರ್ಶನ, ಭದ್ರಾವತಿ FMನಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ, ಟೈಮಿಂಗ್‌ ಏನು?

ಮಧು ಕೈಟಭ ಎಂಬ ರಾಕ್ಷಸರು ವಿಷ್ಣುವಿನ ಕಿವಿಯಿಂದ ಹುಟ್ಟಿದರು. ಆ ರಾಕ್ಷಸರಿಗೆ ಪರಿವರ್ತನೆ ಆಗುವಂತೆ ವಿಷ್ಣು ಹಲವು ಅವಕಾಶ ಕಲ್ಪಿಸಿದ್ದ. ಆದರೆ ಅವರು ಮಾತು ಕೇಳದಿದ್ದಾಗ ಅವರ ವಧೆಯಾಗುತ್ತದೆ. ಇದೆ ರೀತಿ ನಮ್ಮೊಳಗಿನ ನಕಾರಾತ್ಮಕ ಆಲೋಚನೆಗಳನ್ನು ವಧೆ ಮಾಡಬೇಕು. ಹಬ್ಬಗಳ ನೈಜ ಉದ್ದೇಶ ಜೀವನಕ್ಕೆ ಅಳವಡಿಸಕೊಳ್ಳಬೇಕು ಎಂದರು.

ಶಾಸಕ ಎಸ್‌.ಎನ್.ಚನ್ನಬಸಪ್ಪ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಈ ಹಿಂದೆ ಜನರಿಂದ ಹಣ ಸಂಗ್ರಹಿಸಿ ವಿಜಯ ದಶಮಿ ಆಚರಿಸಲಾಗುತ್ತಿತ್ತು. ಮೂರು ದಿನದ ದಸರಾ ಮಾಡಲಾಗುತ್ತಿತ್ತು. ಈಗ ನವರಾತ್ರಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇದಕ್ಕಾಗಿ 15 ಸಮಿತಿಗಳನ್ನು ಕೂಡ ರಚಿಸಲಾಗಿದೆ. ವಿಜಯದಶಮಿಯ ದಿನ ಸಕ್ರೆಬೈಲು ಆನೆಗಳು ಮೂಲಕ ಅಂಬಾರಿ ಉತ್ಸವ ನಡೆಯಲಿದೆ ಎಂದರು.

ನಾಡದೇವಿ ಬೆಳ್ಳಿ ಅಂಬಾರಿಯ ಮೆರವಣಿಗೆ

ದಸರಾ ಉದ್ಘಾಟನೆ ಹಿನ್ನೆಲೆ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇಗುಲದವರೆಗೆ ನಾಡದೇವಿ ಚಾಮುಂಡೇಶ್ವರಿಯ ಮೆರವಣಿಗೆ ನಡೆಸಲಾಯಿತು. ಲಾರಿಯಲ್ಲಿ ದೇವಿಯ ಬೆಳ್ಳಿ ಮೂರ್ತಿ ಇರುವ ಅಂಬಾರಿಯ ಮೆರವಣಿಗೆ ಮಾಡಲಾಯಿತು. ಶಾಸಕ ಚನ್ನಬಸಪ್ಪ, ಮೇಯರ್‌ ಶಿವಕುಮಾರ್‌, ಪಾಲಿಕೆ ಸದಸ್ಯರು, ನಾಗರಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ವಿವಿಧ ಕಲಾತಂಡಗಳನ್ನು ಮೆರವಣಿಗೆಯಲ್ಲಿದ್ದವು. ಇದೇ ವೇಳೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳು ಕಲಾತಂಡಗಳ ವಾದ್ಯಕ್ಕೆ ಹೆಜ್ಜೆ ಹಾಕಿದರು.

ಮೇಯರ್‌ ಶಿವಕುಮಾರ್‌, ಉಪ ಮೇಯರ್‌ ಲಕ್ಷ್ಮಿ ಶಂಕರನಾಯ್ಕ್‌, ಕಮಿಷನರ್‌ ಮಾಯಣ್ಣ ಗೌಡ, ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article night-rain-in-shimoga ಶಿವಮೊಗ್ಗ ನಗರದಲ್ಲಿ ಗುಡುಗು, ಮಿಂಚು ಸಹಿತ ಜೋರು ಮಳೆ, ತಂಪಾದ ಇಳೆ
Next Article Shimoga-Dasara ಫೋಟೊಗಳಲ್ಲಿ ಶಿವಮೊಗ್ಗ ದಸರಾ ಉದ್ಘಾಟನಾ ಸಮಾರಂಭ, ಹೇಗಿತ್ತು ವೈಭವ?

ಇದನ್ನೂ ಓದಿ

Police-Jeep-at-Shimoga-General-Image
CRIME DIARYSHIVAMOGGA CITY

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Crime-News-General-Image
CRIME DIARYSHIVAMOGGA CITY

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Police-Van-Jeep-at-Shimoga-Nehru-Road
CRIME DIARYSHIVAMOGGA CITY

ಬೈಕ್‌ನಲ್ಲಿ ಬಂದು ಆಟೋ ಅಡಗಟ್ಟಿದ ದುಷ್ಕರ್ಮಿಗಳು, ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದು ಪರಾರಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
KS-Eshwarappa-Press-meet-in-Shimoga
SHIVAMOGGA CITY

‘ಮಸೀದಿಗಳಲ್ಲಿ ಆಜಾನ್‌ ಕೂಗುವ ಬದಲು ಮೊಬೈಲ್‌ ಆ್ಯಪ್‌ಗಳನ್ನು ಬಳಸಿʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Shimoga-Mahanagara-Palike-ambedkar-statue
SHIVAMOGGA CITY

ಶಿವಮೊಗ್ಗ ಪಾಲಿಕೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ, ಕಾರಣವೇನು? ಬೇಡಿಕೆಗಳೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Crime-News-General-Image
CRIME DIARYSHIVAMOGGA CITY

ವಿದ್ಯಾನಗರದಲ್ಲಿ ಹಾಡಹಗಲೆ ಮನೆ ಬಾಗಿಲು ತಟ್ಟಿದ ವ್ಯಕ್ತಿ, ಬಾಗಿಲು ತೆಗದಾಗ ಮಾಲೀಕನಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?