SHIVAMOGGA LIVE NEWS |12 DECEMBER 2022
ಶಿವಮೊಗ್ಗ : ಶರಾವತಿ ಸಂತ್ರಸ್ಥರ ಜಮೀನು ಸರ್ವೆ (joint survey) ಕಾರ್ಯ ಬಿರುಸಾಗಿ ನಡೆಯುತ್ತಿದೆ. ಡಿ.20ರ ಒಳಗೆ ಸರ್ವೆ ಪೂರ್ಣಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಮುಖ್ಯಮಂತ್ರಿ ಅವರು ಡಿ.20ರ ಒಳಗೆ ಸರ್ವೆ ಪೂರ್ಣಗೊಳಿಸುವಂತೆ ಡೆಡ್ ಲೈನ್ ನೀಡಿದ್ದಾರೆ. ಅಷ್ಟರ ಒಳಗೆ ಸರ್ವೆ (joint survey) ಪೂರ್ಣಗೊಳಿಸಿ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ – ಮಲೆನಾಡಲ್ಲಿ ಮುಂದುವರೆಯಲಿದೆ ಮಳೆ, ಶಿವಮೊಗ್ಗದ ರೈತರು, ವ್ಯಾಪಾರಿಗಳ ಬದುಕಿಗೆ ಬರೆ
ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸುತ್ತಿದೆ. ಕೆಲವು ಕಡೆಗೆ ತಾವು ಭೇಟಿ ನೀಡಿ ಸರ್ವೆ ಕಾರ್ಯದ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ಸರ್ವೆ ನಂಬರ್ ಮತ್ತು ಗ್ರಾಮವಾರು ಸರ್ವೆಯಾಗುತ್ತಿದೆ. ಅಲ್ಲಲ್ಲಿ ತಾವು ತೆರಳಿ ಸರ್ವೆ ಕಾರ್ಯ ಪರಿವೀಕ್ಷಣೆ ಮಾಡಿರುವುದಾಗಿ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200