ಶಿವಮೊಗ್ಗದಲ್ಲಿ ಡಿಸಿ ಸಿಟಿ ರೌಂಡ್ಸ್, ಸುಮ್ ಸುಮ್ನೆ ರಸ್ತೆಯಲ್ಲಿ ಓಡಾಡುವವರ ವಿಚಾರಣೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇವತ್ತು ಸಿಟಿ ರೌಂಡ್ಸ್ ನಡೆಸಿದರು. ಭಾನುವಾರದ ಕರ್ಫ್ಯೂ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್, ಮುಖ್ಯ ರಸ್ತೆಗಳಲ್ಲಿ ಜನ ಸಂಚಾರ ಕಡಿಮೆ ಇದೆ. ಆದರೆ ಕೆಲವು ಬಡಾವಣೆಗಳಲ್ಲಿ ಜನರು ಓಡಾಡುತ್ತಿದ್ದಾರೆ. ಇದು ನಿಯಂತ್ರಣಕ್ಕೆ ಬರಬೇಕಿದೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

https://www.facebook.com/liveshivamogga/videos/270085701079225/?t=0

ಟೀ ಕುಡಿತಿದ್ದವರಿಗೆ ವಾರ್ನಿಂಗ್

ಜಿಲ್ಲಾಧಿಕಾರಿ ಅವರು ನಗರದ ವಿವಿಧೆಡೆ ಪರಿಶೀಲನೆಗೆ ತೆರಳಿದಾಗ ಕೆಲವರು ಅನಗತ್ಯವಾಗಿ ಓಡಾಡುವುದು ಕಂಡು ಬಂದಿದೆ. ಅವರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಕೆಲವರು ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಇನ್ನೂ ಕೆಲವರು ತರಕಾರಿ ತರುವುದಕ್ಕೆ ಹೋಗುವುದಾಗಿ ಹೇಳಿದ್ದಾರೆ. ಇವರಿಗೆಲ್ಲ ಜಿಲ್ಲಾಧಿಕಾರಿ ಅವರು ತಿಳಿ ಹೇಳಿದ್ದಾರೆ. ಮತ್ತೊಂದೆಡೆ ಟೀ ಅಂಗಡಿ ಒಂದರಲ್ಲಿ ಜನರು ಟೀ ಕುಡಿಯುತ್ತ ಇದ್ದಿದ್ದನ್ನು ಗಮನಿಸಿದ ಡಿಸಿ, ಅಗತ್ಯ ಇದ್ದವರು ಮನೆಗೆ ಕೊಂಡೊಯ್ಯಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.  

ನಗರದ ವಿವಿಧೆಡೆ ತೆರಳಿದ ಜಿಲ್ಲಾಧಿಕಾರಿ, ರಸ್ತೆಯಲ್ಲಿ ಓಡಾಡುವವರನ್ನು ತಡೆದು ವಿಚಾರಣೆ ಮಾಡಿದ್ದಾರೆ. ಸುಮ್ಮನೆ ಒಡಾಡುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment