Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಮಹಿಳೆಯರಿಗೆ 2 ಸಾವಿರ ರೂ. ನೀಡುವ ಗೃಹ ಲಕ್ಷ್ಮಿ ಯೋಜನೆ, ಶಿವಮೊಗ್ಗದಲ್ಲಿ ಅಧಿಕಾರಿಗಳಿಗೆ ಡಿಸಿ 3 ಸೂಚನೆ

ಮಹಿಳೆಯರಿಗೆ 2 ಸಾವಿರ ರೂ. ನೀಡುವ ಗೃಹ ಲಕ್ಷ್ಮಿ ಯೋಜನೆ, ಶಿವಮೊಗ್ಗದಲ್ಲಿ ಅಧಿಕಾರಿಗಳಿಗೆ ಡಿಸಿ 3 ಸೂಚನೆ

16/08/2023 5:52 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 16 AUGUST 2023

SHIMOGA : ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹ ಲಕ್ಷ್ಮಿ (Gruhalakshmi) ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಏಕಕಾಲದಲ್ಲಿ ಎಲ್ಲ ಗ್ರಾಮ ಪ್ರಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ಇದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

DC-Meeting-about-Gruhalakshmi-Yojane.jpg

ಜಿಲ್ಲಾಧಿಕಾರಿ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀಲ್ದಾರರರು, ಇಓಗಳು, ಸ್ಥಳೀಯ ಸಂಸ್ಥೆ ಮುಖ್ಯಸ್ಥರು, ಸಿಡಿಪಿಓಗಳೊಂದಿಗೆ ಗೃಹಲಕ್ಷ್ಮಿ (Gruhalakshmi) ಯೋಜನೆ ಕಾರ್ಯಕ್ರಮ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಪೂರ್ವಭಾವಿ ಸಭೆ ನಡೆಸಿದರು.

ಡಿಸಿ ಸೂಚನೆಗಳೇನು?

POINT 1 jpgಆ.27ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಏಕ ಕಾಲಕ್ಕೆ ಎಲ್ಲ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನ ಹಾಗೂ ನಗರ ಸ್ಥಳೀಯ ಸಂಸ್ಥೆ ವಾರ್ಡ್‍ಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಎಲ್ಲೆಡೆ ಬೆಳಗಾವಿ ಕಾರ್ಯಕ್ರಮ ನೇರ ಪ್ರಸಾರ ಮಾಡಬೇಕು. ಅದಕ್ಕಾಗಿ ಎಲ್‍ಇಡಿ ಪರದೆ ಅಥವಾ ಟಿವಿ ವ್ಯವಸ್ಥೆ ಮಾಡಿಕೊಳ್ಳಬೇಕು. ಫಲಾನುಭವಿಗಳು ಮತ್ತು ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಸೇರಿಸಬೇಕು. ಸರ್ಕಾರಿ ಕಟ್ಟಡಗಳು ಅಥವಾ ಸಭಾ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಇದಕ್ಕೆ ಎಲ್ಲ ಸಿದ್ಧತೆ ಮಾಡಬೇಕು.

ಇದನ್ನೂ ಓದಿ – ‘ಶರಾವತಿ ಸಂತ್ರಸ್ತರ ಸಮಸ್ಯೆಗೆ ಶೀಘ್ರ ಶಾಶ್ವತ ಪರಿಹಾರ, ರೈತರ ಹಿತ ಕಾಯಲು ಕಾನೂನು ಸಮರಕ್ಕು ಸಿದ್ಧ’

POINT 2 jpgಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾ.ಪಂ.ಗಳಲ್ಲಿ, ಮಹಾನಗರ ಪಾಲಿಕೆ ಹಾಗೂ ನಗರಸಭೆಗಳಲ್ಲಿ ಪ್ರತಿ ವಾರ್ಡುಗಳು, ಪುರಸಭೆಗಳಲ್ಲಿ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ 3 ರಿಂದ 4 ವಾರ್ಡುಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಮಳೆಗಾಲವಾದ್ದರಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು.

DC Dr Selvamani Meeting about Gruhalakshmi Scheme

POINT 3 jpgತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾ.ಪಂ ಗಳಲ್ಲಿ ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಈಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು. ನೋಡಲ್ ಅಧಿಕಾರಿಗಳು ಕಾರ್ಯಕ್ರಮದ ಸಿದ್ಧತೆ ಗಮನಿಸಿ ವರದಿ ಸಲ್ಲಿಸಬೇಕು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರು ಗ್ರಾಮ ಪಂಚಾಯಿತಿವಾರು ಉಸ್ತುವಾರಿ ನೋಡಿಕೊಳ್ಳಬೇಕು. ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕುಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಇದ್ದರೆ ಸರಿಪಡಿಸಿ ಸಿದ್ದತೆ ಆರಂಭಿಸಬೇಕು. ಎಲ್ಲ ತಾಲ್ಲೂಕುಗಳ ಸಿಡಿಪಿಓಗಳು ಕಾರ್ಯಕ್ರಮದ ತಯಾರಿ ಕುರಿತು ಮೇಲ್ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು. ಪ್ರತಿ ಗ್ರಾ.ಪಂ.ಯಲ್ಲಿ ಫಲಾನುಭವಿಗಳು, ಸ್ವಸಹಾಯ ಸಂಘಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಕಾರ್ಯಕ್ರಮಕ್ಕೆ ಹಾಜರಾಗುವಂತೆ ಕ್ರಮ ವಹಿಸಬೇಕು.ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪಂಚಾಯಿತಿ ಸಿಇಓ

ಇದನ್ನೂ ಓದಿ – ‘ಲೈಕ್‌, ಷೇರ್‌ ಮಾಡಿ, ಹಣ ಗಳಿಸಿʼ, ನಂಬಿದ ಶಿವಮೊಗ್ಗದ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ ಕಾದಿತ್ತು ಆಘಾತ

ಸಭೆಯಲ್ಲಿ ತಹಶೀಲ್ದಾರ್ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಸಂತೋಷ ಕುಮಾರ್, ಸಿಡಿಪಿಓ ಚಂದ್ರಪ್ಪ, ತಾಲ್ಲೂಕುಗಳ ತಹಶೀಲ್ದಾರರು, ಇಓ, ಸಿಡಿಪಿಓ, ಸ್ಥಳೀಯ ಸಂಸ್ಥೆ ಮುಖ್ಯಸ್ಥರು ಹಾಜರಿದ್ದರು.

PARISHRAMA neet academy

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 160823-Acting-Vice-Chancellor-for-Kuvempu-University-Prof-Venkatesh.jpg ಕೊನೆಗು ಕುವೆಂಪು ವಿವಿಗೆ ಪ್ರಭಾರ ಕುಲಪತಿ ನೇಮಕ
Next Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 16 ಆಗಸ್ಟ್‌ 2023 | ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

ಇದನ್ನೂ ಓದಿ

Lokayukta-raid-at-Shimoga-hosanagara-and-shikaripura.
SHIVAMOGGA CITY

BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Traffic-Police-checks-School-vans-in-Shimoga-city
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Former-Minister-MP-Renukacharya-at-Shimoga-DAR-Police-ground
SHIVAMOGGA CITY

ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Beluru-Gopalakrishna-Speaks-to-media-about-BJP-Leaders
SHIVAMOGGA CITY

‘ಆಗ ಬೀದಿ ರಂಪಾಟ ಮಾಡಿದ್ದ ಬಿಜೆಪಿ ನಾಯಕರ ಬಾಯಿ ಈಗ ಒಣಗಿ ಹೋಗಿದೆಯೇ?ʼ, ಬೇಳೂರು ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?