SHIVAMOGGA LIVE NEWS | 10 APRIL 2024
ELECTION NEWS : ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದ್ದು, ಸಾರ್ವಜನಿಕ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅನುಮಾನ ಮತ್ತು ಅಗತ್ಯ ಬಿದ್ದರೆ ಸರ್ಕಾರಿ ವಾಹನಗಳು, ಪೊಲೀಸ್ ವಾಹನ ಮತ್ತು ಆಂಬುಲೆನ್ಸ್ಗಳನ್ನು ತಾಪಾಸಣೆ ಮಾಡಬಹುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಗುರುದತ್ತ ಹೆಗಡೆ ಅವರು ಈ ವಿಚಾರ ತಿಳಿಸಿದರು.
ಸಂವಾದದಲ್ಲಿ ಡಿಸಿ ಹೇಳಿದ 3 ಪ್ರಮುಖಾಂಶ
ಚುನಾವಣೆ ಅಕ್ರಮದ ಕುರಿತು ಅನುಮಾನ ಬಂದರೆ ಸರ್ಕಾರಿ ವಾಹನ, ಪೊಲೀಸ್ ವಾಹನ, ಆಂಬುಲೆನ್ಸ್ಗಳನ್ನು ಕೂಡ ತಪಾಸಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಇನ್ನು, ಗಡಿಪಾರು ಕುರಿತು ಇಬ್ಬರು ಉಪ ವಿಭಾಗಾಧಿಕಾರಿಗಳು 15 ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ. ಕೂಲಂಕಷ ಪರಿಶೀಲನೆ ಬಳಿಕ ಇನ್ನೊಂದು ವಾರದಲ್ಲಿ ಎಷ್ಟು ಮಂದಿಯನ್ನು ಗಡಿಪಾರು ಮಾಡಲಾಗುತ್ತದೆ ಎಂಬ ಆದೇಶ ಪ್ರಕಟಿಸಲಾಗುತ್ತದೆ.
ಹೊಸನಗರ, ತೀರ್ಥಹಳ್ಳಿಯಲ್ಲಿ ಆರು ಗ್ರಾಮಗಳಲ್ಲಿ ಚುನಾವಣಾ ಬಹಿಷ್ಕಾರ ಧ್ವನಿ ಕೇಳಿಸಿತ್ತು. ನಾಲ್ಕು ಕಡೆ ಅಧಿಕಾರಿಗಳು ಭೇಟಿ ನೀಡಿ ಜನರ ಮನವೊಲಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ನೀರಿನ ಯೋಜನೆ ವಿರೋಧಿಸಿ ಮತ ಬಹಿಷ್ಕಾರ ಮಾಡುವುದಾಗಿ ಘೋಷಿಸಿದ್ದಾರೆ. ಹೊಸನಗರದಲ್ಲಿ ರಸ್ತೆಗಾಗಿ ಮತ ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ. ಅಲ್ಲಿಯು ಮನವೊಲಿಸುವ ಪ್ರಯತ್ನವಾಗುತ್ತಿದೆ.
ಅಭ್ಯರ್ಥಿ, ರಾಜಕಾರಣಿಗಳು ವೈಯಕ್ತಿಕ ಕಮೆಂಟ್, ಟೀಕೆ ಮಾಡುವುದು ಸರಿಯಲ್ಲ. ಈ ಸಂಬಂಧ ಪ್ರಕರಣಗಳು ದಾಖಲಾಗುತ್ತಿವೆ. ವಾಟ್ಸಪ್ನಲ್ಲಿ ಹಳೇ ವಿಡಿಯೋಗಳು ಹರಿದಾಡುತ್ತಿರುವ ಆರೋಪ ಇದೆ. ಈ ಬಗ್ಗೆ ಆಯೋಗ ಗಮನ ಹರಿಸುತ್ತದೆ. ಜನರು ಕೂಡ ಎಚ್ಚರ ವಹಿಸಬೇಕಿದೆ.
ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿ ನಾಗರಾಜ ನೇರಿಗೆ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ ಉಪಸ್ಥಿತರಿದ್ದರು.
ಇದನ್ನೂ ಓದಿ – ಪಿಯುಸಿ ಫಲಿತಾಂಶ, ಶಿವಮೊಗ್ಗದ ಮೂವರಿಗೆ ರ್ಯಾಂಕ್, ಯಾರೆಲ್ಲ ರ್ಯಾಂಕ್ ಪಡೆದಿದ್ದಾರೆ? ಎಷ್ಟು ಅಂಕ ಗಳಿಸಿದ್ದಾರೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200