ಶಿವಮೊಗ್ಗದಲ್ಲಿ ರಾಜ್ಯೋತ್ಸವಕ್ಕೆ ಸಿದ್ಧತೆ, ಇಡೀ ದಿನ ಏನೆಲ್ಲ ಕಾರ್ಯಕ್ರಮ ಇರುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 18 OCTOBER 2024 : ಕರ್ನಾಟಕ ರಾಜ್ಯೋತ್ಸವ (Rajyotsava) ಆಚರಣೆ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು. ನವೆಂಬರ್‌ 1ರಂದು ರಾಜ್ಯೋತ್ಸವದ ಹಿನ್ನೆಲೆ ಯಾವೆಲ್ಲ ಕಾರ್ಯಕ್ರಮ ಆಯೋಜಿಸಬೇಕು ಎಂಬುದರ ಕುರಿತು ಸೂಚನೆ ನೀಡಿದರು.

ಸಭೆಯಲ್ಲಿ ಏನೆಲ್ಲ ಚರ್ಚೆಯಾಯ್ತು?

ನ.1ರಂದು ಬೆಳಗ್ಗೆ 8 ಗಂಟೆಗೆ ಸೈನ್ಸ್‌ ಮೈದಾನದಿಂದ ಮೆರವಣಿಗೆ ನಡೆಯಲಿದೆ. ಪೊಲೀಸ್‌, ಗೃಹ ರಕ್ಷಕ ದಳ, ಸೇವಾದಳ, ಎನ್‌ಸಿಸಿ ಬ್ಯಾಂಡ್‌, ಡೊಳ್ಳು ಕುಣಿತ, ವೀರಗಾಸೆ, ಕೋಲಾಟ, ಭಜನೆ ಸೇರಿದಂತೆ ವಿವಿಧ ತಂಡಗಳು ಭಾಗವಹಿಸಲಿವೆ. ವಿವಿಧ ಶಾಲೆ, ಕಾಲೇಜು ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಇರಲಿದ್ದಾರೆ. ಭುವನೇಶ್ವರಿ ದೇವಿಯ ಮೆರವಣಿಗೆ ನಡೆಯಲಿದೆ.

Pace-College-Prajna.

ನಗರದ ಡಿಎಅರ್‌ ಮೈದಾನದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ಅಲ್ಲಿ ಧ್ವಜಾರೋಹಣ ನೆರವೇರಲಿದ್ದು ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮಹಾನಗರ ಪಾಲಿಕೆ, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಪೊಲೀಸ್‌ ಕಚೇರಿ ಇದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

DC Gurudatta hegde meeting about rajyotsava

ರಾಜ್ಯೋತ್ಸವದ ಹಿನ್ನೆಲೆ ಪ್ರಮುಖ ರಸ್ತೆ, ವೃತ್ತಗಳಲ್ಲಿ ವಿದ್ಯುತ್‌ ದೀಪಾಲಂಕಾರ ಮಾಡಬೇಕು. ಮೆಸ್ಕಾಂ, ಮಹಾನಗರ ಪಾಲಿಕೆ ಅಧಿಕಾರಿಗಳು ಈ ವ್ಯವಸ್ಥೆ ನಿರ್ವಹಿಸಬೇಕು. ಧ್ವನಿವರ್ಧಕದ ಮೂಲಕ ರಾಜ್ಯ ಮತ್ತು ದೇಶ ಭಕ್ತಿಗೀತೆಗಳನ್ನು ಪ್ರಸಾರ ಮಾಡಬೇಕು. ಅಬಕಾರಿ ಇಲಾಖೆ, ನೋಂದಣಿ ಮತ್ತು ವಾಣಿಜ್ಯ ತೆರಿಗೆ ಇಲಾಖೆಗಳ ಇದರ ಜವಾಬ್ದಾರಿ ನಿರ್ವಹಿಸಬೇಕು.

ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ

ಸಂಜೆ ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಹಾನಗರ ಪಾಲಿಕೆ ಇದನ್ನು ನಿರ್ವಹಿಸಬೇಕು. ಸಮಾರಂಭದ ಸ್ಥಳದಲ್ಲಿ ಆಂಬುಲೆನ್ಸ್‌, ಅಗ್ನಿಶಾಮಕ ವಾಹನದ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಇದೇ ವೇಳೆ ವಿವಿಧ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗೆ ಜವಾಬ್ದಾರಿ ನೀಡಿದರು.

ಇದನ್ನೂ ಓದಿ » ನಂದಿನಿಯಿಂದ ಹೊಸ ಉತ್ಪನ್ನ ಮಾರುಕಟ್ಟೆಗೆ, ಇಡ್ಲಿ – ದೋಸೆ ಹಿಟ್ಟು ಪ್ಯಾಕೆಟ್‌ ರಿಲೀಸ್‌

ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನಗರ್‌ ಸೇರಿದಂತೆ ಹಲವರು ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2024

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment