SHIMOGA, 3 SEPTEMBER 2024 : ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ (Festival) ಹಿನ್ನೆಲೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮೂರು ಪ್ರಮುಖ ಆದೇಶ ಹೊರಡಿಸಿದ್ದಾರೆ. ಇಲ್ಲಿದೆ 3 ಫಟಾಫಟ್ ನ್ಯೂಸ್ ಅಪ್ಡೇಟ್
ಏನೆಲ್ಲ ಆದೇಶ ಹೊರಡಿಸಿದ್ದಾರೆ?
» ಬೈಕ್ ರ್ಯಾಲಿ ನಿಷೇಧ
ಶಿವಮೊಗ್ಗ ಲೈವ್.ಕಾಂ : ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ. 6 ರಿಂದ ಸೆ. 20 ರವರೆಗೆ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
![]() |
» ತೆಪ್ಪ ಬಳಕೆಗೆ ಪ್ರಮುಖ ಸೂಚನೆ
ಶಿವಮೊಗ್ಗ ಲೈವ್.ಕಾಂ : ಗಣೇಶ ಮೂರ್ತಿಗಳನ್ನು ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭ ತೆಪ್ಪ ಬಳಕೆಗೆ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಮುಖ ಸೂಚನೆ ನೀಡಿ ಆದೇಶಿಸಿದ್ದಾರೆ. ತೆಪ್ಪದಲ್ಲಿ ಕೇವಲ ಮೂರರಿಂದ ನಾಲ್ಕು ಜನರಿಗೆ ಮಾತ್ರ ಹೋಗಲು ಅವಕಾಶ ನೀಡಬೇಕು. ಕಡ್ಡಾಯವಾಗಿ ಲೈಫ್ ಜಾಕೆಟ್ ಬಳಸಬೇಕು. ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜನೆ ಮಾಡಬೇಕು ಎಂದು ಆದೇಶಿಸಿದ್ದಾರೆ.
» ಡಿಜೆ ನಿಷೇಧ
ಶಿವಮೊಗ್ಗ ಲೈವ್.ಕಾಂ : ಜಿಲ್ಲೆ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಸೆ. 7 ರಿಂದ ಗಣೇಶೋತ್ಸವ ಪೂರ್ಣಗೊಳ್ಳುವವರೆಗೆ ಹಾಗೂ ಸೆ. 16 ರಿಂದ ಈದ್ ಮಿಲಾದ್ ಹಬ್ಬ ಪೂರ್ಣಗೊಳ್ಳುವವರೆಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.ಜೆ.ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200