ಶಿವಮೊಗ್ಗ ಲೈವ್
ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (ganesh) ರಾಜಬೀದಿ ಉತ್ಸವಕ್ಕೆ ಅಂತಿಮ ಸಿದ್ಧತೆ ನಡೆಯುತ್ತಿದೆ. ಸೆ.6ರಂದು ಶಿವಮೊಗ್ಗ ನಗರದಲ್ಲಿ ಗಣಪತಿಯ ಮೆರವಣಿಗೆ ನಡೆಯಲಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಧಿಕಾರಿ ಇವತ್ತು ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನಗರದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದೇ ವೇಳೆ ಹಿಂದೂ ಸಂಘಟನೆಗಳ ಮಹಾಮಂಡಲದ ಪ್ರಮುಖರೊಂದಿಗೆ ಮೆರವಣಿಗೆ ಕುರಿತು ಮಾಹಿತಿ ಪಡೆದರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಶಾಸಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭ ಇದ್ದರು. ಸೆ.6ರಂದು ಬೆಳಗ್ಗೆ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭವಾಗಲಿದೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ


ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗೆ ಬೆಚ್ಚಗೆ ಮಲಗಿತ್ತು ಹಾವು
