ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 13 ಫೆಬ್ರವರಿ 2020

ನನ್ನ ಜೀವನದ ಪ್ರಮುಖ ವಯಸ್ಸನ್ನು ನಾನು ಶಿವಮೊಗ್ಗದಲ್ಲಿ ಕಳೆದಿದ್ದೇನೆ. ಶಿವಮೊಗ್ಗದ ಜೊತೆಗೆ ನನ್ನ ಸಂಬಂಧ ಉಳಿಸಿಕೊಂಡು ಹೋಗುತ್ತಿದ್ದೇನೆ. ಈ ಭಾಗದ ಇನ್ನಷ್ಟು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕಿದೆ. ಇದು ಉಪ ಮುಖ್ಯಮಂತ್ರಿ ಸಿ.ಎಸ್.ಅಶ್ವಥನಾರಾಯಣ ಅವರು ಶಿವಮೊಗ್ಗದ ದಿನಗಳ ನೆನಪು.
ಶಿವಮೊಗ್ಗ ಭೇಟಿ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಉಪ ಮುಖ್ಯಮಂತ್ರಿ ಅಶ್ವಥನಾರಾಯಣ ಅವರು, ಹೈಸ್ಕೂಲ್ ಮತ್ತು ಪಿಯುಸಿಯನ್ನು ನಾನು ಶಿವಮೊಗ್ಗದಲ್ಲಿ ಓದಿದ್ದೇನೆ. ಇಲ್ಲಿನ ಡಿವಿಎಸ್ ಸಂಸ್ಥೆಯಲ್ಲಿ ಹೈಸ್ಕೂಲ್ ವಿದ್ಯಭ್ಯಾಸ ಮಾಡಿದೆ. ಎನ್ಇಎಸ್ ಸಂಸ್ಥೆಯ ನ್ಯಾಷನಲ್ ಕಾಲೇಜಿನಲ್ಲಿ ಪಿಯುಸಿ ಓದಿದ್ದೇನೆ ಎಂದು ಸ್ಮರಿಸಿಕೊಂಡರು.
ಶಿಕ್ಷಣ ಇಲಾಖೆಯಲ್ಲಿಕಾರ್ಯನಿರ್ವಹಿಸುತ್ತಿದ್ದ ತಮ್ಮ ತಂದೆಗೆ ಶಿವಮೊಗ್ಗಕ್ಕೆ ವರ್ಗಾವಣೆಯಾಗಿತ್ತು. ಸುಮಾರು ಐದು ವರ್ಷ ಶಿವಮೊಗ್ಗದಲ್ಲಿದ್ದೆವು. ಆಗಾಗ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದೆವು. ಸ್ನೇಹಿತರು, ಹಿತೈಷಿಗಳು ಇಲ್ಲಿದ್ದಾರೆ. ತಮ್ಮೊಂದಿಗೆ ತಂದೆಯು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಸ್ನೇಹಿತರ ಭೇಟಿಗೆ ತೆರಳಿದ್ದಾರೆ ಎಂದು ಅಶ್ವಥನಾರಾಯಣ ತಿಳಿಸಿದರು.
ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ಬಿಜೆಪಿ ಮುಖಂಡ ದಿನೇಶ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

About The Editor
ನಿತಿನ್ ಆರ್.ಕೈದೊಟ್ಲು














