ಆಸ್ಪತ್ರೆಗೆ ದಾಖಲಾಗಿ 72 ಗಂಟೆಯಲ್ಲಿ ಸೋಂಕಿತರ ಸಾವು, ಶಿವಮೊಗ್ಗದಲ್ಲಿ ಇಂತಹ ಕೇಸ್ ಹೆಚ್ಚು, ಬರ್ತಿದೆ ತಜ್ಞರ ಟೀಮ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021 ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದೆ. ಇದರ ಆಡಿಟ್ ನಡೆಸೋಕೆ ರಾಜ್ಯ ಸರ್ಕಾರ ಈಗ ತಜ್ಞರ ಸಮಿತಿ ಕಳುಹಿಸಲು ನಿರ್ಧರಿಸಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸಾವುಗಳ ಕುರಿತು ಈಗಾಗಲೆ ಜಿಲ್ಲಾ ಮಟ್ಟದಲ್ಲಿ ಆಡಿಟ್ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಾಗಿರಲು ಕಾರಣವನ್ನು ಕಂಡುಕೊಳ್ಳಲು ಬೆಂಗಳೂರಿನಿಂದ ತಜ್ಞರ ಸಮಿತಿಯನ್ನು ಕಳುಹಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾದ 72ಗಂಟೆಯೊಳಗೆ ಸಾವಿಗೀಡಾದವರ ಪ್ರಮಾಣ ಹೆಚ್ಚಾಗಿದ್ದು, ಈ ಕುರಿತು ಸಮಿತಿ ಪರಿಶೀಲನೆ ನಡೆಸಿ ವರದಿಯನ್ನು ನೀಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಶಿವಮೊಗ್ಗ ಭೇಟಿ ವೇಳೆ ತಿಳಿಸಿದ್ದಾರೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment