ಶಿವಮೊಗ್ಗ: ಪಾಕಿಸ್ತಾನದ (Pakistan) ಪ್ರಜೆಗಳು ಇನ್ನೂ ರಾಜ್ಯದ ಅಲ್ಲಲ್ಲಿ ಇರುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಉದಾಸೀನ ಮಾಡದೆ ಇಂತಹವರನ್ನು ಪತ್ತೆ ಮಾಡಿ 24 ಗಂಟೆಯೊಳಗೆ ಅವರನ್ನು ಅವರ ದೇಶಕ್ಕೆ ಕಳುಹಿಸುವ ಪ್ರಯತ್ನ ಮಾಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಪೆಹಲ್ಗಾಮ್ ದಾಳಿ ಬೆನ್ನಿಗೆ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು 48 ಗಂಟೆಯೊಳಗೆ ದೇಶ ತೊರೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಸೂಚನೆ ನೀಡಿದ್ದರು. ಬಿಜೆಪಿ ಆಡಳಿತದಲ್ಲಿರುವ ಎಲ್ಲ ರಾಜ್ಯದಿಂದಲು ಪಾಕಿಸ್ತಾನದ ಪ್ರಜೆಗಳನ್ನು ಹೊರಗೆ ಕಳುಹಿಸಲಾಗುತ್ತಿದೆ. ಆದರೆ ಕರ್ನಾಟಕ ಸೇರಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಪಾಕಿಸ್ತಾನದ ಪ್ರಜೆಗಳನ್ನು ಗುರುತಿಸಿ ಹಿಂದಕ್ಕೆ ಕಳುಹಿಸಲು ಉದಾಸೀನ ತೋರಿಸಲಾಗುತ್ತಿದೆ ಎಂದು ಆರೋಪಿಸಿದರು.
ಸಂಸದ ರಾಘವೇಂದ್ರ ಹೇಳಿದ ಪ್ರಮುಖಾಂಶ
ಪಾಕಿಸ್ತಾನದ ಕೆಲವು ಪ್ರಜೆಗಳು ಕರ್ನಾಟಕದಲ್ಲಿ ಅಲ್ಲಲ್ಲಿ ಇನ್ನೂ ಓಡಾಡುತ್ತಿದ್ದಾರೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮಾಹಿತಿ ಇದೆ.
ನಮ್ಮ ಜಿಲ್ಲೆಯಲ್ಲಿರುವ ಪಾಕಿಸ್ತಾನಿ ನಿವಾಸಿಗಳನ್ನು ಪತ್ತೆ ಹಚ್ಚಿ ತಕ್ಷಣದ ಅವರ ದೇಶಕ್ಕೆ ಕಳುಹಿಸಲು ಪ್ರಯತ್ನ ಮಾಡಬೇಕು.
ಇಂತಹವರನ್ನು 24 ಗಂಟೆಯೊಳಗೆ ಪತ್ತೆ ಹಚ್ಚಿ ಅವರ ದೇಶಕ್ಕೆ ಕಳುಹಿಸುವಂತೆ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.
ವಿವಿಧ ಪ್ರಕೋಷ್ಠಗಳು ಸಹಿ ಸಂಗ್ರಹ ಅಭಿಯಾನ ನಡೆಸುತ್ತಿವೆ. ಮೇ 7ರಂದು ರಾಜ್ಯಪಾಲರಿಗೆ ಇದನ್ನು ರವಾನಿಸಲಾಗುತ್ತದೆ.
ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿ ಸಾಮೂಹಿಕವಾಗಿ ಸಾವಿರ ಜನರಿಂದ ವಚನ ಗಾಯನ, ಹೇಗಿರುತ್ತೆ ಕಾರ್ಯಕ್ರಮ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200