| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಪಾಕಿಸ್ತಾನದ (Pakistan) ಪ್ರಜೆಗಳು ಇನ್ನೂ ರಾಜ್ಯದ ಅಲ್ಲಲ್ಲಿ ಇರುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಉದಾಸೀನ ಮಾಡದೆ ಇಂತಹವರನ್ನು ಪತ್ತೆ ಮಾಡಿ 24 ಗಂಟೆಯೊಳಗೆ ಅವರನ್ನು ಅವರ ದೇಶಕ್ಕೆ ಕಳುಹಿಸುವ ಪ್ರಯತ್ನ ಮಾಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದ್ದಾರೆ.
![]()
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಪೆಹಲ್ಗಾಮ್ ದಾಳಿ ಬೆನ್ನಿಗೆ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು 48 ಗಂಟೆಯೊಳಗೆ ದೇಶ ತೊರೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಸೂಚನೆ ನೀಡಿದ್ದರು. ಬಿಜೆಪಿ ಆಡಳಿತದಲ್ಲಿರುವ ಎಲ್ಲ ರಾಜ್ಯದಿಂದಲು ಪಾಕಿಸ್ತಾನದ ಪ್ರಜೆಗಳನ್ನು ಹೊರಗೆ ಕಳುಹಿಸಲಾಗುತ್ತಿದೆ. ಆದರೆ ಕರ್ನಾಟಕ ಸೇರಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಪಾಕಿಸ್ತಾನದ ಪ್ರಜೆಗಳನ್ನು ಗುರುತಿಸಿ ಹಿಂದಕ್ಕೆ ಕಳುಹಿಸಲು ಉದಾಸೀನ ತೋರಿಸಲಾಗುತ್ತಿದೆ ಎಂದು ಆರೋಪಿಸಿದರು.
ಸಂಸದ ರಾಘವೇಂದ್ರ ಹೇಳಿದ ಪ್ರಮುಖಾಂಶ
ಪಾಕಿಸ್ತಾನದ ಕೆಲವು ಪ್ರಜೆಗಳು ಕರ್ನಾಟಕದಲ್ಲಿ ಅಲ್ಲಲ್ಲಿ ಇನ್ನೂ ಓಡಾಡುತ್ತಿದ್ದಾರೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮಾಹಿತಿ ಇದೆ.
ನಮ್ಮ ಜಿಲ್ಲೆಯಲ್ಲಿರುವ ಪಾಕಿಸ್ತಾನಿ ನಿವಾಸಿಗಳನ್ನು ಪತ್ತೆ ಹಚ್ಚಿ ತಕ್ಷಣದ ಅವರ ದೇಶಕ್ಕೆ ಕಳುಹಿಸಲು ಪ್ರಯತ್ನ ಮಾಡಬೇಕು.
![]()
ಇಂತಹವರನ್ನು 24 ಗಂಟೆಯೊಳಗೆ ಪತ್ತೆ ಹಚ್ಚಿ ಅವರ ದೇಶಕ್ಕೆ ಕಳುಹಿಸುವಂತೆ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.
ವಿವಿಧ ಪ್ರಕೋಷ್ಠಗಳು ಸಹಿ ಸಂಗ್ರಹ ಅಭಿಯಾನ ನಡೆಸುತ್ತಿವೆ. ಮೇ 7ರಂದು ರಾಜ್ಯಪಾಲರಿಗೆ ಇದನ್ನು ರವಾನಿಸಲಾಗುತ್ತದೆ.
ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿ ಸಾಮೂಹಿಕವಾಗಿ ಸಾವಿರ ಜನರಿಂದ ವಚನ ಗಾಯನ, ಹೇಗಿರುತ್ತೆ ಕಾರ್ಯಕ್ರಮ?
![]()

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()