ಶಿವಮೊಗ್ಗ: ದೇಶೀಯ ಉತ್ಪಾದನಾ ಸಾಮರ್ಥ್ಯ ಹಾಗೂ ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಆದ್ಯತೆ ನೀಡುವ ಉದ್ದೇಶದಿಂದ ನಗರದ ಬಂಟರ ಭವನದಲ್ಲಿ ‘ದೇಸಿ ಮೇಳ-ಪರಂಪರೆ’ (Desi Mela) ಶೀರ್ಷಿಕೆಯಡಿ ಡಿ.12ರಿಂದ ಮೂರು ದಿನ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿ ಕೊಳ್ಳಲಾಗಿದೆ ಎಂದು ಮೇಳದ ಆಯೋಜಕ ಪ್ರೊ. ಬಿ.ಎಂ.ಕುಮಾರಸ್ವಾಮಿ ತಿಳಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ, ಯಾವ್ಯಾವ ದಿನ?
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇಶೀಯ ವಸ್ತುಗಳನ್ನು ಕೊಳ್ಳುವ ಮತ್ತು ಬಳಸಲು ಪ್ರೇರಣೆ ನೀಡಲು ಹಾಗೂ ಜನರಲ್ಲಿ ಆರ್ಥಿಕ ದೇಶಭಕ್ತಿ ಮೂಡಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ. ಇದರಿಂದ ಜಿಲ್ಲೆಯ ಉತ್ಪಾದಕರಿಗೆ ಅನುಕೂಲವಾಗುತ್ತದೆ ಎಂದರು.

ಇದನ್ನೂ ಓದಿ » ₹67 ಲಕ್ಷ ಕಳೆದುಕೊಂಡ ಶಿವಮೊಗ್ಗದ 22 ವರ್ಷದ ಯುವತಿ, ಆಗಿದ್ದೇನು?
ಮೇಳದಲ್ಲಿ ಜಿಲ್ಲೆಯ ಉತ್ಪನ್ನಗಳು, ಕರಕುಶಲ ವಸ್ತುಗಳು ಸೇರಿದಂತೆ ಮಹಿಳಾ ಮತ್ತು ಯುವ ಉದ್ದಿಮೆದಾರರ ಉತ್ಪನ್ನಗಳ ಪ್ರದರ್ಶನ ಇರಲಿದೆ. ಗೃಹ ಉತ್ಪನ್ನಗಳು, ಹ್ಯಾಂಡ್ಮೇಡ್ ಹಾಸಿಗೆ ಮತ್ತು ಹೊದಿಕೆಗಳು, ಮಣ್ಣಿನ ಉತ್ಪನ್ನಗಳು, ಖಾದಿ ಉತ್ಪನ್ನಗಳು, ಖಾದ್ಯಗಳು, ಅಲಂಕಾರಿಕ ವಸ್ತುಗಳು ಲಭ್ಯವಿರಲಿವೆ. ಆತ್ಮನಿರ್ಭರ ಭಾರತ ಕಲ್ಪನೆಗೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅರವಿಂದ್, ದಿಲೀಪ್, ಲಿಂಗರಾಜು, ಜಯವರ್ಧನ್ ಇದ್ದರು.
LATEST NEWS
- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





