ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 NOVEMBER 2023
SHIMOGA : ಧೀರ ದೀವರ ಬಳಗದಿಂದ ನ.26ರಂದು ನಗರದ ಈಡಿಗ ಭವನದಲ್ಲಿ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಹ ಸಂಚಾಲಕ ಸುರೇಶ್. ಕೆ.ಬಾಳೆಗುಂಡಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ಕ್ಕೆ ಸಾರಗನಜೆಡ್ಡು ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ ಅವಧೂತ ಹಾಗೂ ನಿಟ್ಟೂರು ಬ್ರಹ್ಮಶ್ರೀ ನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ ಅತಿಥಿಗಳಾಗಿ ಆಗಮಿಸಲಿದ್ದಾರೆ. ದೀವರ ಸಾಂಸ್ಕೃತಿಕ ವೈಭವದ ಸಂಚಾಲಕ ನಾಗರಾಜ್ ನೇರಿಗೆ ಉಪಸ್ಥಿತರಿರಲಿದ್ದಾರೆ ಎಂದರು.
ಮಧ್ಯಾಹ್ನ 3ಕ್ಕೆ ಸಮಾರೋಪ ಸಮಾರಂಭವಿರಲಿದೆ. ಹಸೆ ಚಿತ್ತಾರ ಕಲಾವಿದ ಸಿರಿವಂತೆ ಚಂದ್ರಶೇಖರ್ ಸಮಾರೋಪ ನುಡಿ ಆಡಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಧೀರ ದೀವರು ಹಾಗೂ ರಾಜ್ಯಮಟ್ಟದ ಚಿತ್ತಾರಗಿತ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ, ಭೀಮಣ್ಣ ಟಿ ನಾಯ್ಕ್, ಸೇರಿದಂತೆ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು ಆಗಮಿಸಲಿದ್ದಾರೆ ಎಂದರು.
ಸಿಗಂದೂರು ಧರ್ಮದರ್ಶಿಗೆ ಪ್ರಶಸ್ತಿ
ಈ ಬಾರಿ ಧೀರ ದೀವರು ಪ್ರಶಸ್ತಿಯನ್ನು ಶ್ರೀ ಕ್ಷೇತ್ರ ಸಿಗಂದೂರಿನ ಧರ್ಮದರ್ಶಿ ಡಾ.ಎಸ್.ರಾಮಪ್ಪ, ಹಿರಿಯ ಹಸೆ ಚಿತ್ತಾರ ಕಲಾವಿದೆ ಲಕ್ಷ್ಮಮ್ಮ ಗಡೇಮನೆ, ಅಂತರಾಷ್ಟ್ರೀಯ ಜಾನಪದ ಡೊಳ್ಳು ಕಲಾವಿದ ಬಿ.ಟಾಕಪ್ಪ ಕಣ್ಣೂರು ಅವರಿಗೆ ಪ್ರದಾನ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪುನೀತ್ ಹೆಬ್ಬೂರು, ಕೃಷ್ಣಮೂರ್ತಿ, ಕಲಗೋಡು ಕಾಮಕೃಷ್ಣ, ಜಯದೇವಪ್ಪ, ಲಕ್ಷ್ಮಿಕಾಂತ್ ಚಿಮಣೂರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್ ಶಾಕ್ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ?

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















