ಶಿವಮೊಗ್ಗಕ್ಕೆ ಡಿಜಿ ಐಜಿಪಿ ಭೇಟಿ, ಮಹತ್ವದ ಮೀಟಿಂಗ್‌, ಪೊಲೀಸರಿಗೆ ಖಡಕ್‌ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಗಾಂಜಾ ಬೆಳೆಯುವುದು, ಸೇವನೆ, ಮಾರಾಟ, ಸಂಗ್ರಹಣೆ ಮತ್ತು ಸಾಗಣೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಪೊಲೀಸರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ (DGP) ಎಂ.ಎ.ಸಲೀಂ ಸೂಚಿಸಿದರು.

ಡಿಎಆರ್ ಆವರಣದಲ್ಲಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗಾಂಜಾ ಸೇರಿದಂತೆ ಮಾದಕ ದ್ರವ್ಯ ಮಾರಾಟದ ಬಗ್ಗೆ ತಳಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿ ಎಂದು ಹೇಳಿದರು.

ಜಿಲ್ಲೆಯು ಭೌಗೋಳಿಕವಾಗಿ ಮಾತ್ರವಲ್ಲದೆ ಅಪರಾಧ ಕೃತ್ಯಗಳ ವರದಿಯಲ್ಲೂ ದೊಡ್ಡದಾಗಿದೆ. ಹೀಗಾಗಿ ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಮಟ್ಟ ಹಾಕುವಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಎಂದು ತಿಳಿಸಿದರು.

DG-IGP-MA-Saleem-Visits-shimoga

ನೊಂದವರಿಗೆ ನೆರವು ಹಾಗೂ ಅಪರಾಧಿಗೆ ಶಿಕ್ಷೆ ಎಂಬ ತತ್ವದ ಆಧಾರದ ಮೇಲೆ ಕಾರ್ಯನಿರ್ವಹಿಸಿ. ಈ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ತನಿಖೆ ಕೈಗೊಂಡು ಆರೋಪಿತರಿಗೆ ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿ. ತನಿಖೆಯಲ್ಲಿ ಲೋಪ ಬರದಂತೆ ಎಚ್ಚರಿಕೆ ವಹಿಸಿ ಎಂದು ಸಲಹೆ ನೀಡಿದರು.

DGp-IGP-MA-Saleem-Visits-shimoga

ಮಹಜರುಗಳನ್ನು ನಡೆಸುವಾಗ ಮತ್ತು ಸಾಕ್ಷಿದಾರರನ್ನು ಆಯ್ದುಕೊಳ್ಳುವಾಗ ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರಿ ಪಂಚರನ್ನು ಮತ್ತು ಸರ್ಕಾರಿ ಸಾಕ್ಷಿದಾರರನ್ನು ಆಯ್ದುಕೊಳ್ಳಿ. ಇಂತಹ ನಡೆಯಿಂದ ಪ್ರಕರಣಗಳಲ್ಲಿ ಶಿಕ್ಷೆಯಾಗುವ ಪ್ರಮಾಣ ಹೆಚ್ಚಾಗುತ್ತದೆ ಎಂದರು.

DGp-IGP-MA-Saleem-Visits-shimoga

ದಾವಣಗೆರೆ ಪೂರ್ವವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್ಪಿಗಳಾದ ಎ.ಜಿ. ಕಾರ್ಯಪ್ಪ, ರಮೇಶ್ ಕುಮಾರ್ ಉಪಸ್ಥಿತರಿದ್ದರು.

DGp-IGP-MA-Saleem-Visits-shimoga

ಇದನ್ನೂ ಓದಿ » ಚಂದ್ರಗುತ್ತಿ ದೇಗುಲದಲ್ಲಿ ಹುಂಡಿ ಎಣಿಕೆ, ಎಷ್ಟಿತ್ತು ಭಕ್ತರು ಅರ್ಪಿಸಿದ ಕಾಣಿಕೆ?

DGP

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 5, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment